ಭದ್ರಾವತಿ: ವಿಜ್ಞಾನ, ತಂತ್ರಜ್ಞಾನ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಚೀನಾ ನಂಬರ್ ಒನ್ ಸ್ಥಾನದಲ್ಲಿದೆ. ಭಾರತವೂ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದು ಕುವೆಂಪು ವಿವಿ ಉಪ ಕುಲಪತಿ ಡಾ. ಶರತ್ ಅನಂತಮೂರ್ತಿ ತಿಳಿಸಿದರು.
ನಗರದ ಉಂಬ್ಳೇಬೈಲು ರಸ್ತೆಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 7ನೇ ಪ್ರಾಂತೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈಗಿನ ಪೀಳಿಗೆಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಹಾಗೂ ನಮ್ಮಲ್ಲಿರುವ ತಪ್ಪುಗಳನ್ನು ತಿದ್ದಿಕೊಂಡು ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಬೇಕು ಎಂದು ತಿಳಿಸಿದರು.
ವಾಗ್ಮಿ ಡಾ. ಕೆ.ಪಿ.ಪುತ್ತೂರಾಯ ಮಾತನಾಡಿ, ಯಾವುದೇ ಸಂಘ ಸಂಸ್ಥೆಗಳಿಗೆ ಸದಸ್ಯರ ಸಂಖ್ಯೆ ಮುಖ್ಯವಲ್ಲ. ಸಹಮತ, ಸಹಕಾರ, ಸಂಘಟನೆಗಳು ಮುಖ್ಯವಾಗುತ್ತವೆ. ಸಂಘದಲ್ಲಿ ಸದ್ಭಾವನೆ, ಸದ್ವಿಚಾರ ಇದ್ದರೆ ಸೇವಾ ಭಾವನೆ ಸಹಜವಾಗಿ ಬರುತ್ತದೆ. ಸನಾತನ ಸಂಪ್ರದಾಯಗಳ ಪರಂಪರೆ ಹೊಂದಿರುವ ಭಾರತದಂತಹ ರಾಷ್ಟ್ರದಲ್ಲಿ ಮಾತ್ರ ಇಂತಹ ಗುಣಗಳನ್ನು ಕಾಣಲು ಸಾಧ್ಯ. ಆ ಮೂಲಕ ವಿಶ್ವಕ್ಕೆ ಭಾರತವು ವಿಶ್ವ ಗುರುವಾಗಿದೆ ಎಂದರು.
ಇಂದು ಮಕ್ಕಳಿಗೆ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡುತ್ತಿದ್ದೇವೆಯೇ ಹೊರತು ಸುಸಂಸ್ಕೃತರನ್ನಾಗಿ ಮಾಡುತ್ತಿಲ್ಲ. ಮನುಷ್ಯತ್ವ, ಮಾನವೀಯ ಗುಣಗಳನ್ನು ಕಲಿಸುತ್ತಿಲ್ಲ. ಶಿಕ್ಷಣ ಬೇರೆ, ಸಂಸ್ಕಾರ ಬೇರೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ದೊರೆಯುತ್ತದೆ. ಆದರೆ ಸಂಸ್ಕಾರವನ್ನು ಮನೆಯಲ್ಲೇ ನೀಡಬೇಕು. ಎಷ್ಟೇ ಮುಂದುವರಿದ ದೇಶವಾದರೂ ಜಾತೀಯತೆ ಹೋಗಿಲ್ಲ. ಇದು ಸಮಾಜದ ಬಹುದೊಡ್ಡ ಶತ್ರು. ಪ್ರತಿಭೆ ಎಂಬುದು ಗೌಣವಾಗಿದೆ. ನಾವೆಲ್ಲರೂ ಭಾರತೀಯರು ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕು ಎಂದು ತಿಳಿಸಿದರು.
ಸಮ್ಮೇಳನದ ನೆನಪಿಗಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಯಿತು. ಲಯನೆಸ್ ಚಂದು ಮಹೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಡಿ.ಪ್ರಭುದೇವ್, ಹೆಬ್ಬಂಡಿ ನಾಗರಾಜ್, ಕೆ.ಎಚ್.ರವಿಕುಮಾರ್, ಎ.ಎನ್.ಕಾರ್ತಿಕ್, ಪರಮೇಶ್ವರಪ್ಪ, ರಾಮಮೂರ್ತಿ, ಎನ್.ಶಿವಕುಮಾರ್, ಕೆ.ಜಿ.ರಾಜ್ಕುಮಾರ್ ಇತರರಿದ್ದರು.
ಭಾರತ ಬಲಿಷ್ಠವಾಗಲು ಉತ್ತಮ ಶಿಕ್ಷಣ ರಹದಾರಿ

You Might Also Like
ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional
devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…
ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್ | Summer Tips
Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…
ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs
Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…