More

    ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆ

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಕಳೆದ ವರ್ಷ ಜೂನ್ ಮತ್ತು ಜುಲೈ ತಿಂಗಳ ಅವಧಿಗೆ ಹೋಲಿಸಿದರೆ ಈ ಬಾರಿ ಇದೇ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಯಷ್ಟೇ ಮಳೆಯಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 474 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 389 ಮಿಮೀ ಮಳೆಯಾಗಿ ಶೇ.18 ಕೊರತೆಯಾಗಿತ್ತು. ಈ ಬಾರಿ ಇದೇ ಅವಧಿಯಲ್ಲಿ 471 ಮಿಮೀ ಮಳೆ ಆಗಬೇಕಿತ್ತು. 445 ಮಿಮೀ ಆಗಿದೆ. ಶೇ.5 ಕಡಿಮೆಯಾದರೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

    ಕಳೆದ ವರ್ಷ ಕರಾವಳಿಯಲ್ಲಿ ಶೇ.13 ಕಡಿಮೆ ಮಳೆಯಾಗಿತ್ತು. ಈ ಬಾರಿ 1623 ಮಿಮೀ ಆಗಿದ್ದು, ಶೇ.18 ಕಡಿಮೆ. ಮಲೆನಾಡಿನಲ್ಲಿ ಕಳೆದ ವರ್ಷ ಶೇ.32 ಕಡಿಮೆಯಾಗಿದ್ದ ಮಳೆ ಈ ವರ್ಷ 587 ಮಿಮೀ ಸುರಿದಿದ್ದು, ಶೇ.38 ಕೊರತೆಯಾಗಿದೆ. ಉತ್ತರ ಒಳನಾಡಿನಲ್ಲಿ ಈ ವರ್ಷ ವಾಡಿಕೆಕ್ಕಿಂತ ಶೇ.36 ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.72 ಹೆಚ್ಚು ಮಳೆಯಾಗಿದೆ ಎಂದು ಕೇಂದ್ರದ ಅಧಿಕಾರಿ ಗಾವಸ್ಕಾರ್ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಈ ಗ್ರಾಮದಲ್ಲಿ ಆನ್​ಲೈನ್ ಕ್ಲಾಸ್​ ಫೇಲಾಯಿತು- ಶಾಲೆಯೇ ಮೊಬೈಲ್ ಆಯಿತು ನೋಡಿ!

    ಈ ಬಾರಿ ವಾಡಿಕೆಯಂತೆ ಮುಂಗಾರು ಪ್ರವೇಶಿಸಿತು. ಆರಂಭದಲ್ಲಿ ಮುಂಗಾರು ಮಾರುತಗಳು ದುರ್ಬಳಗೊಂಡಿತ್ತು. ಬಳಿಕ, ಚುರುಕುಗೊಂಡಿತ್ತು. ಹೀಗಾಗಿ, ಕೆಲ ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾದರೆ ಉಳಿದ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಯಿತು. ಇನ್ನೂ 2 ತಿಂಗಳು ಮುಂಗಾರು ಮಳೆ ಇರಲಿದ್ದು, ಮತ್ತಷ್ಟು ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ಸ್ಮಾರ್ಟ್​ಫೋನ್ ಕಳೆದುಕೊಂಡವರ ತುರ್ತು ಗಮನಕ್ಕೆ…

    ಕರಾವಳಿಯಲ್ಲಿ ಭಾರಿ ಮಳೆ: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ. ಕರವಾಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆ.1ರಿಂದ ಆ.5ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಮುಂದಿನ 1 ದಿನ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮುಂದಿನ ಒಂದು ದಿನ ಯೆಲ್ಲೋ ಘೋಷಿಸಲಾಗಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.

    ಜಿರಾಫೆ ಅಂದ್ರೇನೇ ಎತ್ತರ- ಅದ್ರಲ್ಲೂ ಗಿನ್ನೆಸ್ ದಾಖಲೆ ಅಂದ್ರೆ ಇನ್ನೆಷ್ಟು ಎತ್ತರ ಇರಬಹುದು ಅದು…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts