More

    ನಗರದಲ್ಲಿ ಮತ್ತೆ ಪುಂಡರ ಅಟ್ಟಹಾಸ: ಮಹಿಳೆ ಮೇಲೆ ಹಲ್ಲೆ ಮಾಡಿ ಬೇಕರಿ ತಿನಿಸು ಬಿಸಾಡಿದ ಪುಡಿರೌಡಿಗಳು

    ಬೆಂಗಳೂರು: ನಗರದಲ್ಲಿ ಮತ್ತೆ ಪುಂಡರ ಅಟ್ಟಹಾಸ ಶುರುವಾಗಿದೆ. ಬೇಕರಿ ಮಾಲಕಿಯ ಮೇಲೆ ಪುಡಿರೌಡಿಗಳು ಹಲ್ಲೆ ಮಾಡಿ ದಾಂಧಲೆ ನಡೆಸಿರುವ ಅಮಾನುಷ ಘಟನೆ ನಿನ್ನೆ (ಏಪ್ರಿಲ್​ 24) ಸಂಜೆ ಐದು ಗಂಟೆಗೆ ಲಿಂಗರಾಜಪುರದಲ್ಲಿ ನಡೆದಿದೆ.

    ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲಿಂಗರಾಜಪುರದಲ್ಲಿ ಮಹಿಳೆಯೊಬ್ಬರು ಬೇಕರಿ ವ್ಯಾಪಾರ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ಮೂವರು ದುಷ್ಕರ್ಮಿಗಳು ಬೇಕರಿ ಬಳಿ ಬಂದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಜತೆ ಜಗಳ ತೆಗೆದ ಪುಂಡರು, ನೋಡ ನೋಡುತ್ತಿದ್ದಂತೆ ಬೇಕರಿಯಲ್ಲಿದ್ದ ತಿನಿಸುಗಳನ್ನ ರಸ್ತೆಗೆ ಬಿಸಾಡಿ ದಾಂಧಲೆ ನಡೆಸಿದ್ದಾರೆ. ಈ ಘಟನೆಯಿಂದ ಮಹಿಳೆ ಆತಂಕಕ್ಕೀಡಾಗಿದ್ದಾಳೆ.

    ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಡಾ.ರಾಜ್ ಕೊಡುಗೆ ಅಪಾರ: ಅಭಿಮಾನಿಗಳ ಸಂಘದ ಅಧ್ಯಕ್ಷ ಜಿ.ಟಿ.ರವೀಂದ್ರ ಕುಮಾರ್ ಬಣ್ಣನೆ

    ಈ ಹಿಂದೆ ಕುಂದಲಹಳ್ಳಿ ಗೇಟ್ ಸಮೀಪದ ಬೇಕರಿಯೊಂದರ ಹುಡುಗರಿಗೆ ಪುಡಿರೌಡಿಗಳು ಮನಸೋಇಚ್ಛೆ ಥಳಿಸಿದ್ದರು. ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.9 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿದ್ದರು. ಈ ಘಟನೆ ಕುಂದಲಹಳ್ಳಿಗೇಟ್ ಸಮೀಪದ ಕಾಂಡಿಮೆಂಟ್ಸ್‌ವೊಂದರಲ್ಲಿ ನಡೆದಿತ್ತು.

    ಘಟನೆ ಸಂಬಂಧ ಡೆಲಿವರಿ ಬಾಯ್ ಕಾರ್ತಿಕ್ (20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್ (20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್ (23) ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. (ದಿಗ್ವಿಜಯ ನ್ಯೂಸ್​)

    ಸಾರ್ವಜನಿಕ ಸೇವಾ ಸಂಖ್ಯೆಗೆ ಕರೆ ಮಾಡಿ ಯೋಗಿ ಆದಿತ್ಯನಾಥ್​ಗೆ ಜೀವ ಬೆದರಿಕೆ ಹಾಕಿದ ಭೂಪ!

    20 ಕ್ವಿಂಟಲ್​ ಹೂವುಗಳಿಂದ ಅಲಂಕೃತಗೊಂಡ ಕೇದಾರನಾಥ ದೇವಸ್ಥಾನ!

    ಪ್ರಿಯತಮೆ ಮೇಲೆ ಕುದಿಯುವ ಎಣ್ಣೆ ಸುರಿದ ಗೆಳೆಯ; ಪ್ರಿಯಕರನಿಗಾಗಿ ಹುಡುಕಾಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts