ಬೆಂಗಳೂರು: ನಗರದಲ್ಲಿ ಮತ್ತೆ ಪುಂಡರ ಅಟ್ಟಹಾಸ ಶುರುವಾಗಿದೆ. ಬೇಕರಿ ಮಾಲಕಿಯ ಮೇಲೆ ಪುಡಿರೌಡಿಗಳು ಹಲ್ಲೆ ಮಾಡಿ ದಾಂಧಲೆ ನಡೆಸಿರುವ ಅಮಾನುಷ ಘಟನೆ ನಿನ್ನೆ (ಏಪ್ರಿಲ್ 24) ಸಂಜೆ ಐದು ಗಂಟೆಗೆ ಲಿಂಗರಾಜಪುರದಲ್ಲಿ ನಡೆದಿದೆ.
ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲಿಂಗರಾಜಪುರದಲ್ಲಿ ಮಹಿಳೆಯೊಬ್ಬರು ಬೇಕರಿ ವ್ಯಾಪಾರ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ಮೂವರು ದುಷ್ಕರ್ಮಿಗಳು ಬೇಕರಿ ಬಳಿ ಬಂದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಜತೆ ಜಗಳ ತೆಗೆದ ಪುಂಡರು, ನೋಡ ನೋಡುತ್ತಿದ್ದಂತೆ ಬೇಕರಿಯಲ್ಲಿದ್ದ ತಿನಿಸುಗಳನ್ನ ರಸ್ತೆಗೆ ಬಿಸಾಡಿ ದಾಂಧಲೆ ನಡೆಸಿದ್ದಾರೆ. ಈ ಘಟನೆಯಿಂದ ಮಹಿಳೆ ಆತಂಕಕ್ಕೀಡಾಗಿದ್ದಾಳೆ.
ಈ ಹಿಂದೆ ಕುಂದಲಹಳ್ಳಿ ಗೇಟ್ ಸಮೀಪದ ಬೇಕರಿಯೊಂದರ ಹುಡುಗರಿಗೆ ಪುಡಿರೌಡಿಗಳು ಮನಸೋಇಚ್ಛೆ ಥಳಿಸಿದ್ದರು. ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.9 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿದ್ದರು. ಈ ಘಟನೆ ಕುಂದಲಹಳ್ಳಿಗೇಟ್ ಸಮೀಪದ ಕಾಂಡಿಮೆಂಟ್ಸ್ವೊಂದರಲ್ಲಿ ನಡೆದಿತ್ತು.
ಘಟನೆ ಸಂಬಂಧ ಡೆಲಿವರಿ ಬಾಯ್ ಕಾರ್ತಿಕ್ (20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್ (20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್ (23) ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. (ದಿಗ್ವಿಜಯ ನ್ಯೂಸ್)
ಸಾರ್ವಜನಿಕ ಸೇವಾ ಸಂಖ್ಯೆಗೆ ಕರೆ ಮಾಡಿ ಯೋಗಿ ಆದಿತ್ಯನಾಥ್ಗೆ ಜೀವ ಬೆದರಿಕೆ ಹಾಕಿದ ಭೂಪ!
ಪ್ರಿಯತಮೆ ಮೇಲೆ ಕುದಿಯುವ ಎಣ್ಣೆ ಸುರಿದ ಗೆಳೆಯ; ಪ್ರಿಯಕರನಿಗಾಗಿ ಹುಡುಕಾಟ!