ಕೊರಟಗೆರೆ: ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲಕ್ಕೂ ಕರೊನಾ ಛಾಯೆ ಆವರಿಸಿದ್ದು, ದೇವಸ್ಥಾನವನ್ನು ಸೀಲ್ಡೌನ್ ಮಾಡಲಾಗಿದೆ.
ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಅರ್ಚಕರ ಪ್ರಾಥಮಿಕ ಸಂಪರ್ಕದಲ್ಲಿದ್ದ ದೇವಾಲಯದ 80 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ, ಜು.20ರಿಂದಲೇ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲವನ್ನು ಸೀಲ್ಡೌನ್ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿರಿ ಇನ್ನೂ 30 ವರ್ಷ ಕರೊನಾ ಹೋಗಲ್ಲ; ಬ್ರಹ್ಮಾಂಡ ಗುರೂಜಿ ಭವಿಷ್ಯ
ವರಮಹಾಲಕ್ಷ್ಮೀ ಹಬ್ಬಕ್ಕೆ ಗೊರವನಹಳ್ಳಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ, ಈ ವರ್ಷ ದೇವಾಲಯ ತೆರೆಯುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು. ಹಬ್ಬದಲ್ಲಿ ದರ್ಶನದ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್ ತಿಳಿಸಿದ್ದಾರೆ.
ದೇಗುಲ ನೌಕರನ ಪತ್ನಿಗೆ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಜು.20ರಿಂದ ಮಹಾಲಕ್ಷ್ಮೀ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ. ಆದರೆ, ಪ್ರತಿನಿತ್ಯ ಪೂಜೆ ನಡೆಯುತ್ತಿದೆ. ಆಡಳಿತ ಮಂಡಳಿ ಸೂಚನೆಯಂತೆ ನಾವು ಕೆಲಸ ಮಾಡುತ್ತೇವೆ ಎಂದು ಪ್ರಧಾನ ಅರ್ಚಕ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಕಾರು ಅಡ್ಡಗಟ್ಟಿ 45.5 ಲಕ್ಷ ರೂ. ದರೋಡೆ, ಕದ್ದ ಹಣವನ್ನು ಟೈರ್ನಲ್ಲಿ ಬಚ್ಚಿಟ್ಟಿದ್ದ…