ಬೆಂಗಳೂರು: ಇದು ಅನಾರೋಗ್ಯದಲ್ಲಿ ಇರುವವರಿಗೆ ಧೈರ್ಯ ಹೇಳುವಂಥ ವೈದ್ಯರೇ ಧೈರ್ಯ ಕಳೆದುಕೊಂಡಂಥ ಪ್ರಕರಣ. ಅರ್ಥಾತ್, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಥದ್ದೊಂದು ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಪ್ಯಾನ್-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯೊಂದರ ವೈದ್ಯ, ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳ ವೈದ್ಯರಾಗಿದ್ದ ಇವರು, ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಈ ಪ್ರಕರಣ ನಡೆದಿದೆ.
ಇವರು ಬೆಡ್ಶೀಟ್ನಿಂದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಷಮಿಸಿ ಎಂದು ಕುಟುಂಬದವರಲ್ಲಿ ಕೇಳಿಕೊಂಡಿರುವ ಡೆತ್ನೋಟ್ ಕೂಡ ಶವದ ಬಳಿ ಸಿಕ್ಕಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಲಾಗಿದ್ದು, ತಿಲಕನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಡಾಯ ಶಮನಕ್ಕಾಗಿ ಶಾಸಕರ ಕಾಲು ಹಿಡಿಯಲು ಹೋದ ಜೆಡಿಎಸ್ ಅಭ್ಯರ್ಥಿ!