More

    ಸರ್ಕಾರಿ ನೌಕರರ ಕ್ರೀಡಾಕೂಟ

    ಹಾವೇರಿ: ದೈಹಿಕ ಸಮಸ್ಯೆಗಳು ಹಾಗೂ ರೋಗಗಳನ್ನು ತಡೆಗಟ್ಟಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಪ್ರತಿದಿನ ದೇಹ ದಂಡನೆಯಾದರೆ ಉತ್ತಮ ಆರೋಗ್ಯ ನಮ್ಮದಾಗುತ್ತದೆ. ವ್ಯಾಯಾಮ ಮಾಡುವುದರಿಂದ ದೇಹ ಚಟುವಟಿಕೆಯಿಂದ ಕೂಡಿರುತ್ತದೆ. ಇದರಿಂದಾಗಿ ದೇಹ ಮತ್ತು ಮನಸ್ಸಿನಲ್ಲಿ ಚೈತನ್ಯ ಬರುತ್ತದೆ. ಕ್ರೀಡೆಯಲ್ಲಿ ಸ್ಪರ್ಧಿಗಳು ಒತ್ತಡವನ್ನು ಮರೆತು ಪಾಲ್ಗೊಳ್ಳಬೇಕು. ಸ್ಪರ್ಧಿಗಳು ಜಿಲ್ಲಾ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲೆಗೆ ಕೀರ್ತಿತರಬೇಕು ಎಂದರು.

    ಎಸ್​ಪಿ ಕೆ.ಜಿ. ದೇವರಾಜ್, ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಚ್.ಎ. ಜಮಖಾನೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಎಂ.ಎಸ್. ಜಂಗರಡ್ಡೇರ, ತಾಲೂಕು ಅಧ್ಯಕ್ಷರಾದ ಎಂ.ಡಿ. ದ್ಯಾಮಣ್ಣನವರ, ಎಂ.ಎನ್. ಕಂಬಳಿ, ಎನ್.ಎಂ. ಪಾಟೀಲ, ಅರುಣ ಹುಡೇದಗೌಡ್ರು, ಸಿ.ಎಸ್. ಲಕ್ಕನಗೌಡ್ರ, ಸಿ.ಬಿ.ಹಿರೇಮಠ, ಶಿವಲೀಲಾ ಇತರರಿದ್ದರು.

    ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಅತಿಥಿಗಳು ವಾಲಿಬಾಲ್, ಗುಂಡು ಹಾಗೂ ಶಾಟ್​ಪುಟ್ ಎಸೆದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಾಕೀರಅಹ್ಮದ್ ತೊಂಡಿಖಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಡಿ. ಮುದಗಲ್ಲ, ಎಂ.ಎ. ಎಣ್ಣಿ, ನಾಗರಾಜ, ಚಂದ್ರಪ್ಪ ಬ್ಯಾಡಗಿ ಇತರರು ಉಪಸ್ಥಿತರಿದ್ದರು.

    ಪ್ರತಿಭೆ ಪ್ರದರ್ಶಿಸಲು ಸೂಕ್ತ ವೇದಿಕೆ: ಕ್ರೀಡಾ ಜ್ಯೋತಿ ಬೆಳಗಿಸಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಮಾತನಾಡಿ, ದೈನಂದಿನ ಕಚೇರಿ ಕೆಲಸ ಹಾಗೂ ಜೀವನದ ಒತ್ತಡವನ್ನು ಮರೆತು ಎಲ್ಲರೂ ಸಂತಸದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ನಿಮ್ಮಲ್ಲಿರುವ ಉತ್ತಮ ಪ್ರತಿಭೆ ಪ್ರದರ್ಶಿಸಲು ಇದು ವೇದಿಕೆಯಾಗಿದೆ. ಅವಕಾಶವನ್ನು ಸಂಪೂರ್ಣವಾಗಿ ಉಪಯೋಗಿಸಿಕೊಳ್ಳಬೇಕು. ನಮ್ಮ ಜಿಲ್ಲೆಯಲ್ಲಿ ಆಟಗಾರರು ಸ್ವಿಮಿಂಗ್, ಅಥ್ಲೆಟಿಕ್ಸ್ ಮುಂತಾದ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ, ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts