ಕೇಂದ್ರ ಸರ್ಕಾರಿ ನೌಕರರ, ಪಿಂಚಣಿದಾರರ ತುಟ್ಟಿಭತ್ಯೆಗೆ ತಡೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಹಾಗೂ ತುಟ್ಟಿಭತ್ಯೆ ಪರಿಹಾರದ ಹೆಚ್ಚುವರಿ ಮೊತ್ತವನ್ನು ತಡೆಹಿಡಿದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ. 2020ರ ಜನವರಿಯಿಂದ ಬಾಕಿಯಿರುವ ಹಾಗೂ 2021ರ ಜುಲೈವರೆಗೆ ಅನ್ವಯವಾಗುವಂತೆ ತುಟ್ಟಿಭತ್ಯೆಯನ್ನು ತಡೆಹಿಡಿಯಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಕರೊನಾ ಸಂಕಷ್ಟ ಹಿನ್ನೆಲೆಯಲ್ಲಿ ವೈದ್ಯಕೀಯ ಹಾಗೂ ಸಮಾಜದ ಬಡವರು ಹಾಗೂ ನಿರ್ಗತಿಕರ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಮೊತ್ತ ವ್ಯಯಿಸಲಾಗುತ್ತಿರುವ ಕಾರಣ ಹಣಕಾಸು ವೆಚ್ಚವನ್ನು ಸರಿದೂಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದಲ್ಲದೇ, … Continue reading ಕೇಂದ್ರ ಸರ್ಕಾರಿ ನೌಕರರ, ಪಿಂಚಣಿದಾರರ ತುಟ್ಟಿಭತ್ಯೆಗೆ ತಡೆ