ಹೈದರಾಬಾದ್: ಗಣೇಶ ಹಬ್ಬಕ್ಕೆ ಸರ್ಕಾರಿ ರಜೆ ಘೋಷಣೆ ಇರುವುದು ಎಲ್ಲರಿಗೂ ಗೊತ್ತಿರುವಂಥದ್ದೇ. ಆದರೆ ಗಣೇಶ ವಿಸರ್ಜನೆಗೂ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ಕೆಲವೆಡೆ ಸರ್ಕಾರಿ ಕಚೇರಿ, ಸಂಸ್ಥೆಗಳು ಮುಚ್ಚಿರಲಿವೆ.
ಹಾಗಂತ ಕರ್ನಾಟಕದವರು ಖುಷಿ ಪಡುವಂತಿಲ್ಲ. ಏಕೆಂದರೆ ಇಂಥದ್ದೊಂದು ಆದೇಶವನ್ನು ಹೊರಡಿಸಿರುವುದು ತೆಲಂಗಾಣ ಸರ್ಕಾರ. ಗಣೇಶ ವಿಸರ್ಜನೆಯ ಮೆರವಣಿಗೆ ಹಿನ್ನೆಲೆಯಲ್ಲಿ ಅದು ಅಲ್ಲಿನ ಕೆಲವು ನಗರಗಳಲ್ಲಿ ನಾಳೆ ಸರ್ಕಾರಿ ರಜೆ ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಹೈದರಾಬಾದ್, ಸಿಕಂದರಾಬಾದ್, ರಂಗಾರೆಡ್ಡಿ, ಮೆಡ್ಚಲ್-ಮಲ್ಕಜ್ಗಿರಿ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಸೆ. 9ರಂದು ಸರ್ಕಾರಿ ರಜೆ ಇರಲಿದೆ. ನಾಳೆಯ ರಜೆಗೆ ಪರ್ಯಾಯವಾಗಿ ಸೆ. 12ರಂದು ಕೆಲಸದ ದಿನವಾಗಿರಲಿದೆ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ