ಸರ್ಕಾರಿ ಭೂಮಿಯಲ್ಲಿ ಲೇಔಟ್ ನಿರ್ಮಾಣ

ಮಸ್ಕಿ: ಪಟ್ಟಣದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳಗೆ ಮನವಿ ಸಲ್ಲಿಸಿದರು.

ಅಕ್ರಮವಾಗಿ ಮಟ್ಕಾ, ಮದ್ಯ ಮಾರಾಟ, ಜೂಜಾಟ ಹಾಗೂ ಮರಂ, ಉಸುಕು ಸಾಗಣೆ ನಿರಂತರವಾಗಿ ನಡೆದಿದೆ. ತುಂಗಭದ್ರಾ ಜಲಾಶಯದ ನೀರಾವರಿ ಇಲಾಖೆ ಭೂಮಿಯನ್ನು ಅಕ್ರಮವಾಗಿ ಕಬಳಿಸಿಕೊಂಡು ಲೇಔಟ್ ಮಾಡಿ ಸೈಟ್ ಮಾರಾಟ ಮಾಡುತ್ತಿದ್ದು, ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು. ಪಟ್ಟಣದ ಅಶೋಕ ಶಾಸನ ಪ್ರದೇಶ ಅಭಿವೃದ್ಧಿ ಕಾಣದೆ ಪ್ರವಾಸಿಗರನ್ನು ನಿರಾಸೆ ಉಂಟು ಮಾಡುತ್ತಿದೆ.

ಸರ್ಕಾರ 10 ಕೋಟಿ ರೂ. ಮಂಜೂರು ಮಾಡಿದ್ದು, ಆದಷ್ಟು ಬೇಗ ಯೋಜನಾ ವರದಿ ತಯಾರಿಸಿ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿದರು. ಕರವೇ (ನಾರಾಯಣ ಬಣ) ತಾಲೂಕು ಅಧ್ಯಕ್ಷ ದುರ್ಗಾರಾಜ ವಟಗಲ್, ಶಿವರಾಮೇಗೌಡ ಬಣದ ಅಧ್ಯಕ್ಷ ಆರ್.ಕೆ.ನಾಯಕ ಇತರರಿದ್ದರು.

 

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…