More

    ಸರ್ಕಾರದ ಮೇಲೆ ಗೂಬೆ ಕೂರಿಸಬೇಡಿ – ಶಶಿಕಲಾ ಜೊಲ್ಲೆ

    ಬೆಳಗಾವಿ: ಹುಕ್ಕೇರಿ ತಾಲೂಕಿನ ಮಣಗುತ್ತಿಯಲ್ಲಿ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಅಸಮಾಧಾನ ವ್ಯಕ್ತಪಡಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಎಲ್ಲ ಜಾತಿ, ಜನಾಂಗ, ಭಾಷಿಕರನ್ನು ಗಣನೆಗೆ ತೆಗೆದುಕೊಂಡು ಉತ್ತಮ ಆಡಳಿತ ನಡೆಸುತ್ತಿದೆ. ಆದರೂ ಮಣಗುತ್ತಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ತಕ್ಷಣವೇ ಬೇಷರತ್ ಕ್ಷಮೆ ಕೇಳುವಂತೆ ಹಾಗೂ ಗೌರವಯುತವಾಗಿ ಮೂರ್ತಿ ಸ್ಥಾಪಿಸಬೇಕೆಂಬ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್‌ಗೆ ಅವರು ಪ್ರತಿಕ್ರಿಯಿಸಿದರು. ಮಣಗುತ್ತಿಯಲ್ಲಿ ಕಾನೂನು ಪ್ರಕಾರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತೆಗೆದು ಇಡಲಾಗಿದೆ. ಸ್ಥಳ ನಿಗದಿಯಾದ ಬಳಿಕ ಮೂರ್ತಿ ಸ್ಥಾಪಿಸಲಾಗುತ್ತದೆ ಎಂದರು.

    ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಸ್ಥಳೀಯರೇ ಸಭೆ ನಡೆಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. ಆದರೂ ಹೊರಗಿನವರು ಈ ವಿಷಯವನ್ನು ವಿನಾಕಾರಣ ದೊಡ್ಡದು ಮಾಡುತ್ತಿದ್ದಾರೆ. ಎಲ್ಲದಕ್ಕೂ ಸರ್ಕಾರವನ್ನು ಎಳೆದು ತರುವುದು ಸರಿಯಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕ ದುರ್ಯೋಧನ ಐಹೊಳೆ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts