ಇಂಧನ ಬೆಲೆ ಏರಿಕೆ : ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದ್ದೇವೆ ಎಂದ ತೈಲ ಸಚಿವ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರುತ್ತಿರುವ ಸಂದರ್ಭದಲ್ಲಿ ಜನಸಾಮಾನ್ಯರು ಕೇಂದ್ರ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ತೈಲ ಸಚಿವ ಧರ್ಮೇಂದ್ರ ಪ್ರಧಾನ್, ಬೆಲೆ ಏರಿಕೆ ಗ್ರಾಹಕರಿಗೆ ಸಮಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಕೋವಿಡ್​ ಹಿನ್ನೆಲೆಯಲ್ಲಿ ಸರ್ಕಾರದ ಖರ್ಚುವೆಚ್ಚಗಳು ಹೆಚ್ಚಿರುವುದರಿಂದ ಕೇಂದ್ರ ಸರ್ಕಾರ ಈ ಮೂಲಕ ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದೆ ಎಂದಿದ್ದಾರೆ. “ಇಂಧನ ಬೆಲೆಗಳು ಗ್ರಾಹಕರಿಗೆ ಹೊರೆಯಾಗುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ, ಅದರಲ್ಲಿ ಏನೂ ಅನುಮಾನವಿಲ್ಲ. ಆದರೆ … Continue reading ಇಂಧನ ಬೆಲೆ ಏರಿಕೆ : ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದ್ದೇವೆ ಎಂದ ತೈಲ ಸಚಿವ