More

    ಜನರಿಗೆ ಸರ್ಕಾರದ ಯೋಜನೆ ತಲುಪಿಸಿ

    ಮಸ್ಕಿ: ಕೇಂದ್ರ ಸರ್ಕಾರದ ನೀತಿಯಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾನುವಾರ ಮಾತನಾಡಿದರು. ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಶೋಷಿತ, ಬಡಜನರ ಏಳಿಗೆಗಾಗಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತರು ವಹಿಸಿಕೊಳ್ಳಬೇಕು ಎಂದರು.

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿ, ಕಾಂಗ್ರೆಸ್ ಬಡಜನರಿಗಾಗಿ ಶ್ರಮಿಸುವ ಪಕ್ಷವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಗಾಗಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸಬೇಕಾಗಿದೆ ಎಂದರು.

    ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಉಪಾಧ್ಯಕ್ಷರಾದ ವೆಂಕಟರಡ್ಡಿ ಹಾಲಾಪೂರ, ನಿರುಪಾದೆಪ್ಪ ವಕೀಲ, ಸಿದ್ದನಗೌಡ ಮಾಟೂರ್, ಆದನಗೌಡ ಸಂತೆಕಲ್ಲೂರು, ಯುವ ಘಟಕದ ಅಧ್ಯಕ್ಷ ಹನುಮೇಶ ಬಾಗೋಡಿ, ಪ್ರಮುಖರಾದ ಕರಿಯಪ್ಪ ಬೆಂಗಳೂರು, ಶ್ರೀಶೈಲಪ್ಪ ಬ್ಯಾಳಿ, ನಲ್ಲ ವೆಂಕಟೇಶ್ವರ ರಾವ್, ಮಹಿಬೂಬ್ ಸಾಬ್ ಮುದ್ದಾಪೂರ, ತಾಪಂ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ವೆಂಕಟಾಪೂರ, ಫಾರೂಕ್ ಸಾಬ್ ತುರ್ವಿಹಾಳ, ನಾರಾಯಣಪ್ಪ ಕಾಸ್ಲಿ, ದುರಗೇಶ ವಕೀಲ, ಶಬ್ಬೀರ್ ಚೌದ್ರಿ, ಮಲ್ಲನಗೌಡ ಹಳ್ಳಿ, ಬೇಗಂ ಹವಾಲ್ದಾರ್, ಆನಂದ ವೀರಾಪೂರ, ಬಸವರಾಜ ಕೊಠಾರಿ, ರವಿ ಚಿಗರಿ, ನೂರ್ ಅಹ್ಮದ್, ನಾಗರಾಜ ಗುಡಿಸಲಿ, ಬಸವರಾಜ್ ವೆಂಕಟಾಪೂರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts