More

    ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ ಹೊರಡಿಸಿದ ಮುಖ್ಯ ಕಾರ್ಯದರ್ಶಿ

    ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಆದೇಶ ಹೊರಡಿಸಿದೆ.

    ಈಗಾಗಲೇ ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿತ್ತು. ಆದರೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಕಾರಣ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ. ಆದ್ದರಿಂದ, ಕರ್ನಾಟಕ ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನ ನಿಗಮ ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಸೂಚಿಸಲಾಗಿದೆ.

    ಇದನ್ನೂ ಓದಿ: ರಾಜಕೀಯ ನಿವೃತ್ತಿ ಪ್ರಸ್ತಾಪಿಸಿ ಭಾವುಕರಾದ ಶಾಸಕ ಸಾ.ರಾ. ಮಹೇಶ್

    ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸದಿರುವವರನ್ನು ಪತ್ತೆ ಹಚ್ಚಿ, ಬಿಗಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರು ಸರ್ಕಾದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲ ಜಿಲ್ಲಾಧಿಕಾರಿಗಳು, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.

    ಡಿಎನ್​ಎಯಲ್ಲಿ ಗೊತ್ತಾಯ್ತು ಅಪ್ಪನ 30 ಮಕ್ಕಳ ಭಯಾನಕ ಸತ್ಯ… ತಂಗಿಯಲ್ಲಿ ಒಬ್ಳು ಇವನದ್ದೇ ಲವರ್​!

    ಕರೊನಾ ಸೋಂಕಿನಿಂದ ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿಲೀಪ್​ ಗಾಂಧಿ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts