ಬೆಂಗಳೂರು: ಕಾಂಗ್ರೆಸ್ನ ಬಸ್ ಯಾತ್ರೆ ವ್ಯರ್ಥ ಕಸರತ್ತು ಅವರು ಇವತ್ತೇ ಬರೆದಿಟ್ಟುಕೊಳ್ಳಲಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 40 ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗೇಲಿ ಮಾಡಿದರು.
ಬೆಳಗಾವಿಯಿಂದ ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಹಿನ್ನೆಲೆಯಲ್ಲಿ ಸಿಎಂ ಅಧಿಕೃತ ನಿವಾಸದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹುಟ್ಟಿ ಬೆಳೆದವರು. ಅಲ್ಲಿಂದ ಬದಾಮಿಗೆ ಬಂದು ಕೊನೆಗೆ ಅಲ್ಲಿ ಸೋಲ್ತೀನಿ ಅಂತಾ ಅಲ್ಲಿಂದ ಪಲಾಯನ ಮಾಡಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಇನ್ನೂ ಅವರ ಕಾರ್ಯಕರ್ತರಿಗೆ ಎಲ್ಲಿದೆ ರಕ್ಷಣೆ? ಎಂದು ಕಾರಜೋಳ ಕೇಳಿದರು.
ಸುಳ್ಳು ಆರೋಪ
ಯಾವುದೇ ದಾಖಲೆಗಳನ್ನು ನೀಡದೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕೆಂಪಯ್ಯನ್ನು ಇಟ್ಟುಕೊಂಡು ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಬಹುತೇಕ ಕಾಂಗ್ರೆಸ್ ನಾಯಕರು ಎಲ್ಲರು ಬೇಲ್ ಮೇಲೆ ಓಡಾಡುತ್ತಿದ್ದಾರೆ ಎಂದು ಕಾರಜೋಳ ವ್ಯಂಗ್ಯವಾಡಿದರು.
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಮೃತದೇಹ ಪತ್ತೆ
ಹನಿಮೂನ್ ವೇಳೆ ವರನಿಗೆ ಮತ್ತು ಬರುವ ಔಷಧಿ ನೀಡಿ ವಧು ಎಸ್ಕೇಪ್! ಪೊಲೀಸ್ ತನಿಖೆಯಲ್ಲಿ ಕಾರಣ ಬಯಲು
8-9 ಎಕರೆ ಜಮೀನಿದ್ರೂ ಹೆಣ್ಣು ಕೊಡ್ತಿಲ್ಲ! ವಧು ಹುಡುಕಿ ಕೊಡಿ ಎಂದು ಕರೆ ಮಾಡಿದ ಯುವಕನಿಗೆ MLA ಉತ್ತರ ಹೀಗಿತ್ತು…