ವಿಶಾಖಪಟ್ಟಣ: ಆರ್.ಆರ್. ವೆಂಕಟಾಪುರಂನಲ್ಲಿರವ ಎಲ್.ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ಸಂಭವಿಸಿದ ವಿಷಾನಿಲ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಸಿಎಂ ಜಗನ್ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದ್ದು, ನೂರಾಋಉ ಜಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದ್ಲಲದೇ, ಗಂಭೀರವಾಗಿ ಅಸ್ವಸ್ಥಗೊಂಡು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹತ್ತು ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ಇದಲ್ಲದೇ, ಆಸ್ಪತ್ರೆಗಳಿಗೆ ದಾಖಲಾಗಿ ಸಾಮಾನ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲರಿಗೂ ತಲಾ ಒಂದು ಲಕ್ಷ ರೂ.ಗಳನ್ನು ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ; ವಿಷಾನಿಲ ದುರಂತ ಸಂಭವಿಸಿದ ಬಹುರಾಷ್ಟ್ರೀಯ ಕಂಪನಿ ಎಲ್ಜಿ ಪಾಲಿಮರ್ಸ್ ಕಂಪನಿ ಇತಿಹಾಸ ಗೊತ್ತಾ?
ಘಟನಾ ಸ್ಥಳದಲ್ಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿಷಾನಿಲದ ತೀವ್ರತೆಯನ್ನು ಕಡಿಮೆಗೊಳಿಸಲಾಗಿದೆ ಎಂದು ಡಿಜಿಪಿ ದಾಮೋದರ್ ಗೌತಮ್ ಸಾವಂಗ್ ಮಾಹಿತಿ ನೀಡಿದ್ದಾರೆ.
ವಿಷಾನಿಲದಿಂದ ಅಸ್ವಸ್ಥಗೊಂಡವರು ಸಾಕಷ್ಟು ನೀರು ಕುಡಿಯುವುದರಿಂದ ಹಾಗೂ ಮುಖದ ಮೇಲೆ ಒದ್ದೆಯಾದ ಬಟ್ಟೆ ಹಾಕಿಕೊಳ್ಳುವುದರಿಂದ ಅಸ್ವಸ್ಥಗೊಳ್ಳುವುದುನ್ನು ತಡೆಯಬಹುದು. ಆಸ್ಪತ್ರೆಗೆ ದಾಖಲಾಗಿದ್ದ ಹಲವರು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐದು ಹಳ್ಳಿಗಳ ಜನರು ದಿಕ್ಕೆಟ್ಟು ಓಡಿದ್ದೇಕೆ? ನಿಂತಲ್ಲಿ, ಕುಳಿತಲ್ಲಿಯೇ ಪ್ರಜ್ಞೆ ತಪ್ಪಿದ್ದೇಕೆ?