ಭೊಪಾಲ್: ಬಸ್ ಆಜ್ ಕೀ ರಾತ್ ಹೈ ಜಿಂದಗೀ ಕಲ್ ಹಮ್ ಕಹಾ ತುಮ್ ಕಹಾ ನೃತ್ಯ ಮಾಡುತ್ತಾ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಮಧ್ಯಪ್ರದೇಶ ಅಂಚೆ ವೃತ್ತದ ಸಹಾಯಕ ನಿರ್ದೇಶಕ ಟೆಕ್ನಿಕಲ್ ಸುರೇಂದ್ರ ಕುಮಾರ್ ದೀಕ್ಷಿತ್(55) ಮೃತಪಟ್ಟವರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಹಿಂದುತ್ವದ ಬಗ್ಗೆ ಅವಹೇಳನ; ನಟ ಚೇತನ್ ಬಂಧನ
In Madhya Pradesh Postal Circle Office, Assistant Director (Technical) Surendra Kumar Dixit collapsed while dancing with the employees.#MadhyaPradesh #viral #viralvideo #heartattack2023 #heartattack #SuddenDeaths2023 #SuddenDeath #India pic.twitter.com/4Vvwzz74h9
— Siraj Noorani (@sirajnoorani) March 20, 2023
34ನೇ ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿಯನ್ನು ಅಂಚೆ ಇಲಾಖೆಯು ಮಾರ್ಚ್ 20 ರಂದು ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುರೇಂದ್ರ ಕುಮಾರ್ ದೀಕ್ಷಿತ್ ತಮ್ಮ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಬಾವಿಯಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಬಯಲಾಯ್ತು ಬಾಲಕಿಯ ಚಿಮ್ಮಕ್ಕನ ಕಿರಾತಕ ಕೃತ್ಯ!
ಒಂದು ಕ್ಷಣ ನೃತ್ಯ ಮಾಡುತ್ತಿದ್ದ ಸಂಗಡಿಗರಿಗೆ ಏನಾಗಿದೆ ಎಂದು ಅರ್ಥವಾಗಿಲ್ಲ. ಎದ್ದೇಳಿಸಲು ಮುಂದಾದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಸುರೇಂದ್ರ ಕುಮಾರ್ ದೀಕ್ಷಿತ್ ಮತ್ತು ಅವರು ಸ್ನೇಹಿತರೊಂದಿಗೆ ಹೆಚ್ಚು ಹೊತ್ತು ನೃತ್ಯ ಮಾಡಿದ್ದಾರೆ. ಹೀಗಾಗಿ ಧಣಿವಿನಿಂದ ಹೃದಯಾಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. (ಏಜೆನ್ಸೀಸ್)