More

    ಗ್ರಾಪಂ ಚುನಾವಣೆ ದ್ವೇಷಕ್ಕೆ ಬಲಿಯಾಯ್ತು ಅಡಕೆ ತೋಟ!

    ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯ ಜಿದ್ದಾಜಿದ್ದಿನ ಪೈಪೋಟಿ, ಸೋಲು-ಗೆಲುವು ಸಹಜ. ಆದರೆ, ಸೋಲಿಂದ ಕಂಗೆಟ್ಟ ಕೆಲವರು ಮಾಡುತ್ತಿರುವ ಅವಾಂತರ ಅಷ್ಟಿಷ್ಟಲ್ಲ.

    ರಾಜಕೀಯ ದ್ವೇಷಕ್ಕೆ ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತರೊಬ್ಬರ 2 ಎಕರೆ ಜಮೀನಿನಲ್ಲಿ ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ಕಿಡಿಗೇಡಿಗಳು ನಾಶ ಮಾಡಿ ವಿಕೃತಿ ಮೆರೆದಿದ್ದರು. ಇದೀಗ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ನೆಟ್ಟೆಗೆರೆ ಗೇಟ್​ನಲ್ಲಿ 250ಕ್ಕೂ ಹೆಚ್ಚು ಅಡಕೆ ಗಿಡಗಳಿಗೆ ಬೆಂಕಿ ಹಚ್ಚಿದ್ದಾರೆ! ಇದನ್ನೂ ಓದಿರಿ ಗ್ರಾಪಂ ಚುನಾವಣೆ ಸೋಲಿಂದ ಕಂಗೆಟ್ಟವ ರಾತ್ರೋರಾತ್ರಿ ರಸ್ತೆಯನ್ನೇ ಬಂದ್​ ಮಾಡಿದ!

    ನೆಟ್ಟೆಗೆರೆ ಗೇಟ್ ನಿವಾಸಿ ಮಾಯಣ್ಣಗೌಡ ಅವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರಚಾರಕ್ಕೆ ಹೋಗಿದ್ದರು. ಇದೇ ಕಾರಣಕ್ಕೆ ಕೆಲ ದುಷ್ಕರ್ಮಿಗಳು ಮಾಯಣ್ಣಗೌಡರ ಅಡಕೆ ತೋಟಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.

    ಅಡಕೆ ಗಿಡ, ಹನಿ ನೀರಾವರಿ ಪೈಪ್​ಗಳು, ಪಂಪು ಮೋಟಾರ್ ಸುಟ್ಟಿದ್ದು, 10 ಲಕ್ಷ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ.

    ಗ್ರಾಪಂ ಚುನಾವಣೆ ದ್ವೇಷಕ್ಕೆ ರಾತ್ರೋರಾತ್ರಿ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ!

    54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

    ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts