ರಾಯಚೂರು: ಗ್ರಾಮ ಪಂಚಾಯಿತಿಗೆ ಸೇರಿದ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ 15 ಜನ ಸದಸ್ಯರ ಸದಸ್ಯತ್ವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ರಾಯಚೂರು ತಾಲೂಕಿನ ಎಲೆ ಬಿಚ್ಚಾಲಿ ಗ್ರಾ. ಪಂ ಸದಸ್ಯರ ಸದಸ್ಯತ್ವವನ್ನು ರದ್ದುಪಡಿಸಿ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 14ನೇ ಹಣಕಾಸು ಯೋಜನೆ ಅನುದಾನ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿಕೊಂಡ ಆರೋಪದ ಮೇಲೆ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ ಸೇರಿ ಒಟ್ಟು 15 ಜನ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಮೂಲಕ ಆದೇಶ ಹೊರಡಿಸಲಾಗಿದೆ.
2016-2017ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಡಿ ಅನುದಾನದ ಚೆಕ್ಗಳನ್ನು ಸದಸ್ಯರು ತಮ್ಮ ಪತಿ, ಮಾವನ ಹೆಸರಲ್ಲಿ ವೈಯಕ್ತಿಕವಾಗಿ ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿ ಆರೋಪ ಸಾಬೀತು ಹಿನ್ನೆಲೆ ಸಿಇಒ ಲಕ್ಷ್ಮೀಕಾಂತರಡ್ಡಿ ಡಿ.14ರಂದು ವರದಿಯನ್ನ ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿದ್ದಾರೆ.
ಈ ವರದಿ ಆಧರಿಸಿ ಪ್ರಾದೇಶಿಕ ಆಯುಕ್ತರು 15 ಜನರ ಸದಸ್ಯತ್ವ ರದ್ದುಗೊಳಿಸು ವಂತೆ ಸರಕಾರಕ್ಕೆ ಶಿಫಾರಸು ಮಾಡಿದ್ದರು.