More

    ತುಮಕೂರಲ್ಲಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ: ಸಿದ್ಧಗಂಗಾ ಮಠಕ್ಕೆ ಎಚ್​ಡಿಕೆ ಭೇಟಿ

    ತುಮಕೂರು: ಜೆಡಿಎಸ್​ನ ಪಂಚರತ್ನ ರಥಯಾತ್ರೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯಶಸ್ವಿ ಯಾತ್ರೆ ಮುಗಿಸಿದ ಖುಷಿಯೊಂದಿಗೆ ಜೆಡಿಎಸ್​ನ ಪಂಚರತ್ನ ರಥಯಾತ್ರೆಯು ಇಂದು(ಗುರುವಾರ) ತುಮಕೂರು ಪ್ರವೇಶಿಸಿದೆ. ಪಂಚರತ್ನ ರಥಯಾತ್ರೆಗೆ ತುಮಕೂರು ನಗರದಾದ್ಯಂತ ಅದ್ದೂರಿ ಸ್ವಾಗತ ಸಿಕ್ಕಿದೆ.

    ತುಮಕೂರು ನಗರ ಕ್ಷೇತ್ರದಲ್ಲಿ ರಥಯಾತ್ರೆ ಪ್ರಾರಂಭಿಸುವ ಮುನ್ನ ಸಿದ್ಧಗಂಗಾ ಮಠಕ್ಕೆ ತೆರಳಿದ ಎಚ್​ಡಿಕೆ, ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಶುಭಘಳಿಗೆ, ಶುಭಮಹೂರ್ತದಲ್ಲಿ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ 11 ಕ್ಷೇತ್ರಕ್ಕೆ 11 ಕ್ಷೇತ್ರವನ್ನೂ ಗೆಲ್ಲುವ ವಿಶ್ವಾಸವಿದೆ. ಅತಂತ್ರ ಪರಿಸ್ಥಿತಿ ಉದ್ಭವಿಸಲ್ಲ. ಬಿಜೆಪಿ ಮತ್ತು ಕಾಂಗ್ರೆಸ್​ನ ಸಹವಾಸ ಮಾಡೋಲ್ಲ. ಸ್ವತಂತ್ರ ಬಲದಿಂದ ಸರ್ಕಾರ ರಚನೆ ಮಾಡ್ತೀವಿ ಎಂದರು.

    ತುಮಕೂರಲ್ಲಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ: ಸಿದ್ಧಗಂಗಾ ಮಠಕ್ಕೆ ಎಚ್​ಡಿಕೆ ಭೇಟಿ

    ಯಾವ ಪಕ್ಷದಲ್ಲಿ ಯಾರನ್ನು ಸೆರಿಸಿಕೊಳ್ಳುತ್ತಾರೆ, ಯಾರನ್ನು ಕಳುಹಿಸ್ತಾರೆ ಎಂಬುದು ನನಗೆ ಬೇಡದ ವಿಚಾರ. ನನ್ನ ಗುರಿ ಇರೋದು ಪಂಚರತ್ನ ಯಾತ್ರೆ ಮೂಲಕ ನಾಡಿನ ಜನರ ಸಮಸ್ಯೆಗಳಿಗೆ ಪರಿಹಾರ ಕೊಡೋದು. ತುಮಕೂರು ನಗರ ಕ್ಷೇತ್ರದಲ್ಲಿ ಜೆಡಿಎಸ್​ ಟಿಕೆಟ್ ಯಾರಿಗೆ ಎಂಬ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತ ಗೋವಿಂದರಾಜು ಅವರು ಒಳ್ಳೆಯ ಕೆಲಸ ಮಾಡಿಕೊಂಡು ಬಂದಿದ್ದಾರೆ‌. ಗೋವಿಂದರಾಜುಗೆ ಟಿಕೆಟ್ ಕೊಡೋದು ಕನ್ಫರ್ಮ್​ ಆಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಎಚ್​ಡಿಕೆ ಸ್ಪಷ್ಟಪಡಿಸಿದರು.

    ಶಾಮಿಯಾನದ ಕಂಬ ಮುಟ್ಟಿದ ವಿದ್ಯಾರ್ಥಿ ಸಾವು: ಈಜು ಸ್ಪರ್ಧೆಗೆ ರಾಮನಗರಕ್ಕೆ ಆಗಮಿಸಿದ್ದವ ದುರಂತ ಅಂತ್ಯ

    ಕನ್ನಡ ಧ್ವಜ ಹಾರಿಸಿದ ಕನ್ನಡ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಎಚ್​ಡಿಕೆ ಆಕ್ರೋಶ

    ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts