More

    ದನದ ಕೊಟ್ಟಿಗೆ ನಿರ್ಮಾಣಕ್ಕೆ ಅನುದಾನ

    ರಾವಂದೂರು: ಪಿರಿಯಾಪಟ್ಟಣ ತಾಲೂಕಿನ ದೊಡ್ಡಬೇಲಾಳು ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ 2022- 23ನೇ ಸಾಲಿನ ಸಾಮಾಜಿಕ ಪರಿಶೋಧನಾ ಸಭೆಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

    ಪಿರಿಯಾಪಟ್ಟಣ ತಾಲೂಕಿನ ಸಾಮಾಜಿಕ ಪರಿಶೋಧನೆ ವ್ಯವಸ್ಥಾಪಕ ಎಸ್.ಮಂಜುನಾಥ್ ಮಾತನಾಡಿ, 2022- 23ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 191 ಕಾಮಗಾರಿ ಅನುಷ್ಠಾನಗೊಂಡಿದ್ದು, 60,68,125 ರೂ. ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಡಿ 24 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 19,93,443 ರೂ. ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ ಎಂದರು.

    ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ನಿರ್ಮಾಣ ಮಾಡಲು ಎಲ್ಲ ವರ್ಗದವರಿಗೂ 57,000 ರೂ. ನೀಡುತ್ತಿದ್ದು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಯಲ್ಲಿ ಹೆಸರು ನೋಂದಾಯಿಸಿದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎಲ್.ಅನಿತಾ, ಉಪಾಧ್ಯಕ್ಷೆ ಸಾವಿತ್ರಮ್ಮ, ನೋಡಲ್ ಅಧಿಕಾರಿ ಮಲ್ಲಿಕಾರ್ಜುನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಎಂ.ರಾಮರಾಧ್ಯ, ಕಾರ್ಯದರ್ಶಿ ಮಹದೇವ್, ಲೆಕ್ಕ ಸಹಾಯಕ ದೇವರಾಜ್, ಕರ ವಸೂಲಿಗಾರ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಗಣೇಶ್, ನಾಗರಾಜ್, ಸುರೇಶ್, ಕುಮಾರ್, ಶಿಲ್ಪಾ, ಇಂದ್ರೇಶ್, ಸ್ವಾಮಿಗೌಡ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts