ಬೆಂಗಳೂರು: ರಾಜ್ಯಾದ್ಯಂತ ಇರುವ ಶಿಕ್ಷಕರ ಬೇಡಿಕೆಯಂತೆ ಇದೀಗ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದ್ದು, ಶಿಕ್ಷಕರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಸ್. ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆಯ ಆಧಾರದ ಮೇಲೆ ಶೇಕಡವಾರು ಮಿತಿ ಲೆಕ್ಕಾಚಾರ ಮಾಡಿ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಬಹುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಇಲ್ಲಿ ರಾತ್ರಿ ಯಾರು ಬೇಕಾದರೂ ನಿರಾತಂಕವಾಗಿ ಸಂಚರಿಸಬಹುದು; ನೈಟ್ ವಾಕ್ಗೆ ಇದು ಜಗತ್ತಿನಲ್ಲೇ ಅತ್ಯಂತ ಸುರಕ್ಷಿತ!
ಶಿಕ್ಷಕರ ವರ್ಗಾವಣೆ ಸಂಬಂಧ ಸರ್ಕಾರದ ಆದೇಶದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಶಿಕ್ಷಣ ಸಚಿವರು ಮತ್ತು ಸರ್ಕಾರದ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.