ಧಾರವಾಡ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಜಿಲ್ಲಾ ಮಟ್ಟದ ಸಭೆಯನ್ನು ಅ. 22ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪೊಲೀಸ್ ಕಾಯಾìಲಯದ ಸಭಾಭವನದಲ್ಲಿ ನಿಗದಿಪಡಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮುಖಂಡರು ಸಭೆಗೆ ಹಾಜರಾಗಬೇಕು ಎಂದು ಪೊಲೀಸ್ ಅಧಿìಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.