ಸಪ್ತಪದಿ ತುಳಿದ ಐದೇ ದಿನಕ್ಕೆ ಮದುಮಗ ಸಾವು, 20 ಜನರಿಗೆ ಕೋವಿಡ್​ ಸೋಂಕು!

ಕಾರವಾರ: ಮದುವೆಯಾದ ಐದೇ ದಿನಕ್ಕೆ 25 ವರ್ಷದ ಯುವಕ ಕರೊನಾಗೆ ಬಲಿಯಾಗಿದ್ದು, ವಿವಾಹ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 100 ಜನರ ಪೈಕಿ 20 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನೂ ಹಲವರ ಪರೀಕ್ಷಾ ವರದಿ ಬರಬೇಕಿದೆ. ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದ ಮಂಗಳೂರು ಮೂಲದ ಯುವಕನ ಮದುವೆ ಜೂ.25ರಂದು ಭಟ್ಕಳದಲ್ಲಿ ಇಲ್ಲಿನ ಯುವತಿಯೊಬ್ಬಳ ಜತೆ ನೆರವೇರಿತ್ತು. ಈ ಮದುವೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ವರನಿಗೆ ಕರೊನಾ ಲಕ್ಷಣವಿದ್ದರೂ ನಿರ್ಲಕ್ಷಿಸಿ ಆತನ ಕುಟುಂಬಸ್ಥರು ಮದುವೆ ಮಾಡಿದ್ದು, ಸೋಂಕು ಹರಡಲು ಕಾರಣರಾಗಿದ್ದಾರೆ ಎಂದು … Continue reading ಸಪ್ತಪದಿ ತುಳಿದ ಐದೇ ದಿನಕ್ಕೆ ಮದುಮಗ ಸಾವು, 20 ಜನರಿಗೆ ಕೋವಿಡ್​ ಸೋಂಕು!