More

    ರಾಜಕೀಯ ದ್ವೇಷ: ಬಿಜೆಪಿ-ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗುಂಪು ಘರ್ಷಣೆ, ಗಾಯಾಳು ಆಸ್ಪತ್ರೆಗೆ ದಾಖಲು

    ಚಿತ್ರದುರ್ಗ: ರಾಜ್ಯದಲ್ಲಿ ಚುನಾವಣಾ ಕಾವೇರಿದ್ದು, ರಾಜಕೀಯ ಪಕ್ಷಗಳ ಬೆಂಬಲಿಗರ ಮಧ್ಯೆಯೂ ಪೈಪೋಟಿ ಯುದ್ಧೋತ್ಸಾಹವಾಗಿ ಪರಿಣಮಿಸಿದೆ. ಅದರಲ್ಲೂ ಇಲ್ಲೊಂದು ಕಡೆ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗುಂಪು ಘರ್ಷಣೆ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಯಾದಘಟ್ಟ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಈ ಘರ್ಷಣೆ ನಡೆದಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಮತ್ತು ಬಿಜೆಪಿ ಅಭ್ಯರ್ಥಿ ಎಸ್.ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಗುಂಪುಗಳ ಮಧ್ಯೆ ಈ ಘರ್ಷಣೆ ನಡೆದಿದೆ.

    ಇದನ್ನೂ ಓದಿ: ಕೊನೆಗೂ ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ; ಸಂಸದ ಸ್ಥಾನದಿಂದ ಅನರ್ಹಗೊಂಡ ತಿಂಗಳ ಬಳಿಕ ತೆರವು 

    ಗಿರೀಶ್ ಮನೆ ಬಳಿಗೆ ಬಂದಿದ್ದ ಓಂಕಾರಪ್ಪ ಮತ್ತಿತರರ ಗುಂಪು ಗಿರೀಶ್ ತಂದೆ ಮರುಳಪ್ಪಗೆ ದೊಣ್ಣೆ ಕಲ್ಲುಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಈ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    ‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

    ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts