ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಿಂಪಡೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಅಕ್ಷರಶಃ ರಣರಂಗವಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದ ರೈತ ಮುಖಂಡರು ಸರ್ಕಾರದ ಮಾರ್ಗ ಸೂಚಿಯನ್ನ ಬ್ರೇಕ್ ಮಾಡಿದ್ದಾರೆ. ಪೊಲೀಸ್ ಸರ್ಪಗಾವಲನ್ನೇ ದಾಟಿಕೊಂಡು ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು, ಧ್ವಜಸ್ತಂಭವೇರಿ ಕಿಸಾನ್ ಯೂನಿಯನ್ ಧ್ವಜ ಹಾರಿಸಿದ್ದಾರೆ.
ಕೆಂಪುಕೋಟೆ ಮೇಲೆ ಜಮಾವಣೆಗೊಂಡ ರೈತರ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಕೆಂಪುಕೋಟೆಗೆ ಮುತ್ತಿಗೆ ಹಾಕಲಾಗಿದ್ದು, ಗಣರಾಜ್ಯೋತ್ಸವ ದಿನದಂದೇ ಇಂತಹ ಘಟನೆ ನಡೆದಿರುವುದು ವಿಪರ್ಯಾಸ. ಇದನ್ನೂ ಓದಿರಿ VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್ ಪರೇಡ್’, ತಲ್ವಾರ್ ಹಿಡಿದು ಬಂದ ರೈತರು!
ಪ್ರಾರಂಭದಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಸರ್ಕಾರದ ಗೈಡ್ಲೈನ್ಸ್ ಅನ್ನೇ ಉಲ್ಲಂಘಿಸಿ, ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಕ್ಕೆ ಸಾರ್ವಜನಿಕ ವಲಯದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ, 11 ಸುತ್ತಿನ ಮಾತುಕತೆ ನಡೆಸಿದರೂ ಕೇಂದ್ರ ಸರ್ಕಾರದಿಂದ ರೈತರ ಬೇಡಿಕೆ ಈಡೇರಿಲ್ಲ. ಇನ್ನೆಷ್ಟು ದಿನ ರೈತರು ಕಾಯಬೇಕು? ಎಂಬ ಮಾತು ಕೂಡ ಕೇಳಿ ಬರುತ್ತಿದೆ.
VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್ ಪರೇಡ್’, ತಲ್ವಾರ್ ಹಿಡಿದು ಬಂದ ರೈತರು!
ಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…