ಗ್ಯಾರಂಟಿ ಯೋಜನೆಗಳಿಂದ ಪ್ರಗತಿ ಕುಂಠಿತ

blank

ಕಬ್ಬೂರ: ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಸಮೀಪದ ಮಮದಾಪುರ ಕೆಕೆ, ಪೊಗತಾನಟ್ಟಿ, ಬೆಳಕೂಡ, ಉಮರಾಣಿ ಗ್ರಾಮದ ಎಸ್ಸಿ ಕಾಲನಿಗೆ ತಲಾ 5 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಬೆಳಗಲಿ-ಕೆಂಚನಟ್ಟಿ ರಸ್ತೆಯಿಂದ ಪಾಶ್ಚಾಪುರೆ ತೋಟದವರೆಗೆ ಜಿಲ್ಲಾ ಪಂಚಾಯಿತಿಯ 20 ಲಕ್ಷ ರೂ.ಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಬಿಜೆಪಿ ಸರ್ಕಾರದಲ್ಲಿ ಬಿಡುಗಡೆಯಾದ ಅನುದಾನವನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿತ್ತು. ಸರ್ಕಾರದ ಗಮನ ಸೆಳೆದು ಪುನಃ ಕೆಲವು ಕಾಮಗಾರಿಗೆ ಅನುದಾನ ತಂದಿದ್ದೇನೆ. ಚಳಿಗಾಲದ ಅಧಿವೇಶನದಲ್ಲಿ ಕ್ಷೇತ್ರದ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತೇನೆ. ಕರಗಾವಿ ನೀರಾವರಿ ಸೇರಿ ಅನೇಕ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದರು.

ಹೀರಾ ಶುಗರ್ಸ್‌ ನಿರ್ದೇಶಕ ಸುರೇಶ ಬೆಲ್ಲದ ಮಾತನಾಡಿದರು. ಮಲ್ಲೇಶ ಹನುಮಂತಗೋಳ, ರಬಸಿದ್ದ ವಡೇರಹಟ್ಟಿ, ಪರಸಪ್ಪ ಹನುಮನ್ನವರ, ಲಂಕೇಶ ಹನುಮನ್ನವರ, ಲಗಮಪ್ಪ ಮಸಗುಪ್ಪಿ, ಶಿವರಾಜ ಗುಡಸ, ಶಿವಾನಂದ ಪಾಟೀಲ, ಬಸಲಿಂಗ ಕಾಡೇಶಗೋಳ, ಮಹಾದೇವ ಜಿವಣಿ, ಅರುಣ ಮರ‌್ಯಾಯಿ, ಸಿದ್ದಪ್ಪ ಈಟಿ, ಕಲ್ಲಪ್ಪ ಪಾಶ್ಚಾಪೂರೆ, ನಿಜಾಮ ಪೆಂಡಾರೆ, ಬಸವರಾಜ ಬೆಕ್ಕೇರಿ, ನಾರಾಯಣ ನರಗುಂದೆ ಇತರರಿದ್ದರು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…