blank

ಗ್ಯಾರಂಟಿ ಯೋಜನೆಗಳ ಸದುಪಯೋಗ ಅಗತ್ಯ

Jaatha Lead

ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅನಿಸಿಕೆ

ಜಾಗೃತಿ ವಾಹನ ಜಾಥಾಕ್ಕೆ ಚಾಲನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ರಾಜ್ಯ ಸರ್ಕಾರ ಜನತೆಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಲಕ್ಷಾಂತರ ಜನರು ಪ್ರಯೋಜನ ಪಡೆದಿದ್ದಾರೆ. ಯೋಜನೆಯ ಲಾಭ ಪಡೆಯದಿದ್ದವರು ಅಥವಾ ತಪ್ಪಿ ಹೋದವರಿದ್ದರೆ ಈಗಲೂ ಸಹ ಯೋಜನೆ ಪಡೆದುಕೊಳ್ಳಬಹುದಾಗಿದೆ. ಜನತೆಗೆ ಆರ್ಥಿಕ ಉಳಿತಾಯ ಆಗಬೇಕೆಂದು ಈ ಯೋಜನೆ ನೀಡಲಾಗಿದ್ದು, ದುರುಪಯೋಗ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಲಹೆ ನೀಡಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತಾಗಿ ರಾಜ್ಯವ್ಯಾಪಿ ಮಾಹಿತಿ ಒದಗಿಸಲು ಆಯೋಜಿಸಿರುವ ಜಾಗೃತಿ ಜಾಥಾ ವಾಹನ ಫೆ 15ರಂದು ಉಡುಪಿಗೆ ಆಗಮಿಸಿದ್ದು, ಜಿಲ್ಲಾದ್ಯಂತ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಕಚೇರಿಯ ಬಳಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್​ ಕಾಂಚನ್​, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್​ ಹೆರೂರು, ವಾರ್ತಾಧಿಕಾರಿ ಮಂಜುನಾಥ್​, ಉಡುಪಿ ಜಿಲ್ಲಾಧಿಕಾರಿ ಕಚೇರಿಯ ವಿವಿಧ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

Ramesh Kanchanರಾಜ್ಯ ಕಾಂಗ್ರೆಸ್​ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ದೀನ-ದಲಿತರ ಹಾಗೂ ಜನಸಾಮಾನ್ಯರ ಜೀವನವನ್ನು ಬೆಳಗಿಸುತ್ತಲಿದೆ. ಈ ಯೋಜನೆಗಳು ಇನ್ನಷ್ಟು ಸಮರ್ಪಕವಾಗಿ ಜನಸಾಮಾನ್ಯರನ್ನು ತಲುಪಿಸಬೇಕೆನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸೌಲಭ್ಯಗಳ ಕುರಿತು ಜನರಿಗೆ ಅರಿವು ಮೂಡಿಸಲು ರಾಜ್ಯಾದ್ಯಂತ ವಾಹನ ಜಾಥಾ ಸಂಚರಿಸಲಿದೆ.
| ರಮೇಶ್​ ಕಾಂಚನ್​. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…