ಎಲ್ಲ ಸಮುದಾಯದವರಿಗೂ ಮಾರ್ಗದರ್ಶಕರು

ತಾವರಗೇರೆಯಲ್ಲಿ ಹಮ್ಮಿಕೊಂಡಿದ್ದ ಶ್ರೀರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಕುಷ್ಟಗಿ ಮದ್ದಾನಿ ಹೀರೆಮಠದ ಶ್ರೀ ಕರಿಬಸವ ಶಿವಾಚಾರ್ಯರು ಉದ್ಘಾಟಿಸಿದರು. ನಿಡಶೇಷಿ ಗೆಜ್ಜೆಭಾವಿ ಮಠದ ಅಭಿನವ ಕರಿಬಸವ ಶಿವಾಚಾರ್ಯರು, ಪ್ರಮುಖರಾದ ಗುರುಮೂರ್ತಿ ಸ್ವಾಮಿ, ದೊಡ್ಡಬಸಯ್ಯ, ಶಿವಕುಮಾರ, ಶಿವರಾಜ ಶಾಸ್ತ್ರಿ, ಶ್ರೀಕರ, ಮಲ್ಲಪ್ಪ, ಉಮೇಶ, ಪಾಲಾಕ್ಷಯ್ಯ, ಸುಜಾತಾ ಇತರರಿದ್ದರು.

ತಾವರಗೇರಾ: ರೇಣುಕಾಚಾರ್ಯರು ಎಲ್ಲ ಸಮುದಾಯದವರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದು ಕುಷ್ಟಗಿ ಮದ್ದಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯರು ಹೇಳಿದರು.

ಇದನ್ನೂ ಓದಿ:ಜಗದ್ಗುರು ರೇಣುಕಾಚಾರ್ಯರು ಯಾರ ಸ್ವತ್ತಲ್ಲ

ನಗರದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ವೀರಮಹೇಶ್ವರ ಜಂಗಮ ಕ್ಷೇಮಾಭಿವೃದ್ಧಿ ಸೇವಾ ಸಂಘದಿಂದ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿಡಶೇಸಿ ಗೆಜ್ಜೆಭಾವಿ ಮಠದ ಅಭಿನವ ಕರಿಬಸವ ಶಿವಾಚಾರ್ಯರು ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ಕಲಿಸಬೇಕು. ರೇಣುಕಾಚಾರ್ಯರ ತತ್ವಗಳನ್ನು ಅಳವಡಿಸಿ ಕೊಳ್ಳಬೇಕು ಎಂದರು.
ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುಮೂರ್ತಿ ಹಿರೇಮಠ, ಕುಷ್ಟಗಿ ತಾಲೂಕು ಅಧ್ಯಕ್ಷ ಶಿವಕುಮಾರ ಗಂಧದಮಠ, ಕರ್ನಾಟಕ ರತ್ನ ಪ್ರಶಸ್ತಿ ವಿಜೇತ ಶಿವರಾಜ ಶಾಸ್ತ್ರಿ, ಪ್ರಮುಖರಾದ ಸವಿತಾ ಹಿರೇಮಠ, ರಾಚಯ್ಯ ಹಿರೇಮಠ, ಪಾಲಾಕ್ಷಯ್ಯಸ್ವಾಮಿ, ಬಸವರಾಜ ಸಾರಂಗ ಮಠ, ದೊಡ್ಡಬಸಯ್ಯ ಹಿರೇಮಠ, ಉಮೇಶ ಹಿರೇಮಠ, ಶ್ರೀಕರ ಭೂಸನೂರಮಠ, ಚಂದ್ರ ಶೇಖರಯ್ಯ ಹಿರೇಮಠ, ಮಲ್ಲಪ್ಪ ಜುಮಲಾಪೂರ, ಮಂಜುನಾಥ ಇತರರಿದ್ದರು.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…