More

    ಇಂದು ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

    ಗುಳೇದಗುಡ್ಡ: ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ.10 ರಂದು ತಾಲೂಕಿನ ಕಟಗೇರಿಯಲ್ಲಿ ನಡೆಯಲಿದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.
    ಸಮ್ಮೇಳನವನ್ನು ಹಬ್ಬದಂತೆ ಆಚರಿಸಲು ನಿರ್ಧರಿಸಲಾಗಿದೆ.

    ಅಂದು ಬೆಳಗ್ಗೆ 7ಗಂಟೆಗೆ ಧ್ವಜಾರೋಹಣ, 8ಗಂಟೆಗೆ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಕೊಂಕನಕೊಪ್ಪ ಕ್ರಾಸ್‌ನಿಂದ ಮೆರವಣಿಗೆ ಆರಂಭವಾಗಿ ಕಟಗೇರಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ವಿವಿಧ ವಾಧ್ಯ ಮೇಳ, ಕಳಸ ಹಾಗೂ ಕುಂಭದೊಂದಿಗೆ ನಡೆಯಲಿದೆ.

    ನಂತರ ಸಾಹಿತಿ ಚನ್ನಪ್ಪ ಕಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸುವರು. ತಾಲೂಕು ದರ್ಶನ ಗೋಷ್ಠಿ, ಕಟಗೇರಿ ಪರಿಸರದ ಐತಿಹ್ಯಗಳ ಕುರಿತು ವಿಶೇಷ ಉಪನ್ಯಾಸ, ಸರ್ವಾಧ್ಯಕ್ಷರ ಬದುಕು-ಬರಹ ಸಂವಾದ ಗೋಷ್ಠಿ, ಕವಿಗೋಷ್ಠಿ, ಬಹಿರಂಗ ಅಧಿವೇಶನ, ನಿರ್ಣಯ ಮಂಡನೆ, ಬಳಿಕ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts