ಕೋವಿ, 40 ಸಾವಿರ ನಗದು ಕಳವು

ನಾಪೋಕ್ಲು: ಬೇತು ಗ್ರಾಮದ ಮನೆಗೆ ಬೀಗ ಒಡೆದು ಕನ್ನ ಹಾಕಿದ ಚೋರರು ಕೋವಿ, ಬೆಳ್ಳಿಯ ಕತ್ತಿ ಹಾಗೂ ಗ್ಯಾಸ್ ಸಿಲಿಂಡರನ್ನು ಕಳ್ಳತನ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬೇತು ಗ್ರಾಮದ ಮಕ್ಕಿ ಶಾಸ್ತವು ದೇವಾಲಯದ ಸಮೀಪ ವಾಸವಿರುವ ನಿವೃತ್ತ ಸೈನಿಕ ಕೊಂಡಿರ ನಂದ ಕುಮಾರ್ ಅವರ ಮನೆ ಕಳತನ ನಡೆದಿದೆ. ನಂದ ಕುಮಾರ್ ಅವರಿಗೆ ಅನಾರೋಗ್ಯದ ನಿಮಿತ್ತ ಇತ್ತೀಚೆಗೆ ಚಿಕಿತ್ಸೆಗೆಂದು ಬೆಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಮನೆಯ ಬೀಗ ಒಡೆದು ಮನೆಯ ಕೋಣೆ ಒಳಗಿದ್ದ ಬೀರುಗಳನ್ನು ಒಡೆದು 40,000ಕ್ಕೂ ಅಧಿಕ ಮೌಲ್ಯದ ಬೆಳ್ಳಿಯ ಕತ್ತಿ, ಸಿಂಗಲ್ ಬೆರಲ್ ಕೋವಿ ಹಾಗೂ ಗ್ಯಾಸ್ ಸಿಲಿಂಡರನ್ನು ಕದ್ದು ಪರಾರಿಯಾಗಿದ್ದಾರೆ. ಗುರುವಾರ ನಂದ ಕುಮಾರ್ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.
ನಂದಕುಮಾರ್ ಪುತ್ರಿ ಭೋಜಮ್ಮ ಪೊಲೀಸರಿಗೆ ಶುಕ್ರವಾರ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಸ್ಥಳಕ್ಕೆ ಠಾಣಾ ಅಧಿಕಾರಿ ಮಂಜುನಾಥ, ಸಿಬ್ಬಂದಿ ಹಾಗೂ ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗಾಗಿ ಪೊಲೀಸರು ಬೆಲೆಬೀಸಿದ್ದಾರೆ.

blank
Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…