ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ದೇವೇಗೌಡರ ಮೊಮ್ಮಗ ಅಂದ್ರೆ ಮಾಜಿ ಸಚಿವ ಎಚ್.ಡಿ. ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಶನಿವಾರ ಅವಿರೋಧ ಆಯ್ಕೆಯಾದರು. ಆ ಮೂಲಕ ದೇವೇಗೌಡರ ಮತ್ತೊಂದು ಕುಡಿ ನೇರ ರಾಜಕೀಯ ಅಖಾಡಕ್ಕೆ ಇಳಿದಂತಾಗಿದೆ. ಇದನ್ನೂ ಓದಿರಿ ‘ಇದು ಹೃದಯಹೀನ ಸರ್ಕಾರ…’ ಎಂದು ರಾಜ್ಯದ ವಿರುದ್ಧ ಕಿಡಿಕಾರಿದ ಬಿಜೆಪಿ ಎಂಎಲ್ಸಿ
ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಡಾ.ಸೂರಜ್ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಸುಗಮವಾಯಿತು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಡಾ.ಸೂರಜ್, ದಂಡಿಗನಹಳ್ಳಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಹತ್ತಿರವಾಗಿದ್ದಾರೆ.
ತಂದೆ ಎಚ್.ಡಿ. ರೇವಣ್ಣ, ಜಿಪಂ ಸದಸ್ಯೆ ಹಾಗೂ ತಾಯಿ ಭವಾನಿ ರೇವಣ್ಣ, ಸಹೋದರ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆನ್ನೆಲುಬಾಗಿ ನಿಂತು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಡಾ.ಸೂರಜ್ ಸಕ್ರಿಯರಾಗಿ ತೊಡಗಿಕೊಂಡಿದ್ದರು. ಇದೀಗ ಎಚ್ಡಿಸಿಸಿ ಬ್ಯಾಂಕ್ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದಾರೆ.