ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.
ಇಂದು (17) ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್ ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ: ಭಾರತದ ಸಿನಿಮಾ ಕ್ರೇಜ್ ಹೆಚ್ಚಾಗಲು ಪಣತೊಟ್ಟಿರುವ ನಾಲ್ವರು ನಿರ್ದೇಶಕರು ಇವರೇ ನೋಡಿ; director
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು, ಇನ್ನಷ್ಟು ಮಾಹಿತಿ ಹಾಗೂ ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿದ್ದು, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಹಾಗಾಗಿ ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ.
ಸಮೀಕ್ಷೆಯ ಮಾನದಂಡಗಳ ಬಗ್ಗೆ ಚರ್ಚೆ
ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ ಎಂದು ಎಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಈ ವರದಿಯನ್ನು ಇತ್ತೀಚೆಗೆ ಸರ್ಕಾರದ ಕೈಸೇರಿದ್ದು ಮಾನದಂಡಗಳನ್ನು ಚರ್ಚಿಸಿದ್ದೇವೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಲವಾರು ಮಾನದಂಡಗಳನ್ನು ಚರ್ಚಿಸಿದ್ದೇವೆ ಎಂದು ಸಚಿವರು ಪುನರುಚ್ಚರಿಸಿದರು.
ಇದನ್ನೂ ಓದಿ: ಜಾತಿ ಗಣತಿ ಬಗ್ಗೆ ಸಚಿವ ಸಂಪುಟದಿಂದ ಯಾವುದೇ ನಿರ್ಣಯ ಇಲ್ಲ; ಹಾಗಾದ್ರೆ ಸಚಿವರು ಹೇಳಿದ್ದೇನು Caste Census Report
ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆ
ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದಿದ್ದಾರೆ. ಸಮೀಕ್ಷಾ ವರದಿಯ ಮಾಹಿತಿ ಪತ್ರಿಕೆಗಳಲ್ಲಿ ಈಗಾಗಲೇ ಬಂದಿದೆ, ವರದಿ ಮಂಡನೆಯಾಗಿ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.
ಭಾರತದ ಸಿನಿಮಾ ಕ್ರೇಜ್ ಹೆಚ್ಚಾಗಲು ಪಣತೊಟ್ಟಿರುವ ನಾಲ್ವರು ನಿರ್ದೇಶಕರು ಇವರೇ ನೋಡಿ; director