ಬೆಂಗಳೂರು: ರಾಜ್ಯಸರ್ಕಾರ ಇನ್ನೂ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ. ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಇನ್ನೂ ಯಾರಿಗೂ ಮಂತ್ರಿ ಸ್ಥಾನ ನೀಡಿಲ್ಲ.
ಹೀಗಿರುವಾಗ ಬೈ ಎಲೆಕ್ಷನ್ನಲ್ಲಿ ಸೋತ ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಅವರು ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೊದಲು ಎಚ್.ವಿಶ್ವನಾಥ್ ಅವರು ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿಯಾಗಿ ತಮಗೂ ಸೂಕ್ತ ಸ್ಥಾನಮಾನ ನೀಡಲು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಜತೆಗೆ ತಮ್ಮ ಹುಣಸೂರು ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.
ಬಳಿಕ ಸಿಎಂ ನಿವಾಸಕ್ಕೆ ಆಗಮಿಸಿದ ಎಂ.ಟಿ.ಬಿ.ನಾಗರಾಜ್ ಕೂಡ ಬಿಎಸ್ವೈ ಜತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ.
ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಹೋಗಿದ್ದವರೆಲ್ಲಿ ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಹೊರತುಪಡಿಸಿ ಉಳಿದವರೆಲ್ಲ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ. (ದಿಗ್ವಿಜಯ ನ್ಯೂಸ್)