More

    ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ, ಶಾಸಕ ಭೀಮನಾಯ್ಕ ಹೇಳಿಕೆ

    ಹಗರಿಬೊಮ್ಮನಹಳ್ಳಿ: ವಿಧಾನಸಭಾ ಕ್ಷೇತ್ರದ ತಂಬ್ರಹಳ್ಳಿ ಜಿಪಂ ವ್ಯಾಪ್ತಿಯ ಎಲ್ಲ ಗ್ರಾಪಂಗಳಲ್ಲಿ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಸ್.ಭೀಮಾನಾಯ್ಕ ಹೇಳಿದರು. ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ 3.50 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ ಮೆಟ್ರಿಕ್ ನಂತರ ಬಾಲಕಿಯರ ಬೃಹತ್ ವಸತಿ ನಿಲಯವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.

    ಕ್ಷೇತ್ರದಲ್ಲಿ ವಿವಿಧೆಡೆ 25 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತ ಗ್ರಂಥಾಲಯ, ತಂಬ್ರಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ 1.75 ಕೋಟಿ.ರೂ ಅನುದಾನ ನೀಡಲಾಗಿದೆ. ತಂಬ್ರಹಳ್ಳಿ ಜಿಪಂ ವ್ಯಾಪ್ತಿಯ ಬಾಚಿಗೊಂಡನಹಳ್ಳಿ, ಮುತ್ಕೂರು, ಬನ್ನಿಗೋಳ, ತಂಬ್ರಹಳ್ಳಿ ಗ್ರಾಪಂಗಳಲ್ಲಿ ಸಾಕಷ್ಟು ಅಭಿವೃಧ್ದಿ ಮಾಡಲಾಗಿದ್ದು, ಪ್ರತಿ ಗ್ರಾಮಗಳಲ್ಲಿ ಶುದ್ದ ಕುಡಿವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಗಾಮಕ್ಕೆ ಸಿಸಿರಸ್ತೆ, ಚರಂಡಿ, ಶಾಲಾ ಕಟ್ಟಡ, ಬಿಸಿಯೂಟದ ಕೋಣೆ ನಿರ್ಮಾಣ ಮಾಡಲಾಗಿದೆ ಎಂದರು.

    ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ ಮಾತನಾಡಿದರು. ಪಿಯು ಕಾಲೇಜು ಪ್ರಾಚಾರ್ಯ ಸತೀಶ್, ಗ್ರಾಪಂ ಉಪಾಧ್ಯಕ್ಷ ಆರ್.ಬಸಲಿಂಗನಗೌಡ, ಸದಸ್ಯರಾದ ಎಚ್.ದೊಡ್ಡಬಸಪ್ಪ, ಪ್ರಮುಖರಾದ ಗದ್ದಿಕೇರಿ ವೀರಣ್ಣ, ಬಾಳಿಕಾಯಿ ಚಿದಾನಂದಪ್ಪ, ಪಿ.ಕೊಟ್ರೇಶ, ಮುತ್ಕೂರು ಲಚ್ಚಪ್ಪ, ಮಂಜುನಾಥ ಪಾಟೀಲ್, ಪಟ್ಟಣಶೆಟ್ಟಿ ಸುರೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts