ನಂದಿನಿ, ಅಮೂಲ್ ಹಾಲಿನ ಉತ್ಪನ್ನಗಳ ವಿಲೀನಗೊಳಿಸುವ ಕ್ರಮ ಸಲ್ಲದು

HB Halli Amul Nandini

ಹಗರಿಬೊಮ್ಮನಹಳ್ಳಿ: ನಂದಿನಿ ಕೆಎಂಎಫ್ ಹಾಲಿನ ಉತ್ಪನ್ನಗಳನ್ನು ಗುಜರಾತಿನ ಅಮೂಲ್‌ನೊಂದಿಗೆ ವಿಲೀನಗೊಳಿಸುವ ಕ್ರಮವನ್ನು ಸರ್ಕಾರ ಕೈಬಿಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ತಹಸಿಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ವಿಶ್ವೇಶ್ವರಯ್ಯ, ಅನ್ನದಾನೇಶ್ವರಗೆ ಶನಿವಾರ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಕೆಎಂಎಫ್ – ಅಮೂಲ್ ವಿಲೀನಕ್ಕೆ ಕೇಂದ್ರ ಹುನ್ನಾರ

ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ ಮಾತನಾಡಿ, ರಾಜ್ಯದಲ್ಲಿ ಕೆಎಂಎಫ್ ಒಕ್ಕೂಟದಿಂದ ನಂದಿನಿ ಉತ್ಪನ್ನಗಳು ತಮ್ಮದೇ ಆದ ಉತ್ಕೃಷ್ಟ ಗುಣಮಟ್ಟ ಹೊಂದಿವೆ. ರಾಜ್ಯದ ರೈತರ ಬಹುಪಾಲು ಕೊಡುಗೆಯಿಂದ ಮಾರುಕಟ್ಟೆಯಲ್ಲಿ ಕಡಿಮೆ ದರದಲ್ಲಿ ಲಭ್ಯವಾಗುತ್ತಿದೆ.

ಪಶು ಸಂಗೋಪನೆಗೆ ಪ್ರೋತ್ಸಾಹ

ನಂದಿನಿ ಹಾಲಿನ ಉತ್ಪಾದನೆ ಹೆಚ್ಚಿಸಿ ಕರ್ನಾಟಕದ ಕೋಟ್ಯಂತರ ರೈತರ ಪಶು ಸಂಗೋಪನೆಗೆ ಸಹಾಯಕವಾಗಲು ಪ್ರೋತ್ಸಾಹ ನೀಡಬೇಕು. ಸರ್ಕಾರ ಯೋಚಿಸಿರುವ ಗುಜರಾತಿನ ಅಮೂಲ್‌ನೊಂದಿಗೆ ವಿಲೀನಗೊಳಿಸುವ ಕ್ರಮ ಕೈಬಿಡಬೇಕೆಂದು ಒತ್ತಾಯಿಸಿದರು.

ರೈತ ಸಂಘದ ಮಹೇಶ್ ಬನ್ನಿಗೋಳ, ಅಲ್ಲಂಬಾಷಾ, ತಂಬ್ರಹಳ್ಳಿ ವೀರಣ್ಣ, ಎಂ.ಜಿ.ಮೃತ್ಯುಂಜಯಗೌಡ, ಜೆ.ಎಂ.ರುದ್ರಮುನಿಸ್ವಾಮಿ, ಆರ್.ಸಿದ್ದರೆಡ್ಡಿ, ಪಿ.ಬಸವನಗೌಡ, ಬೆಳಗುಂದಿ ಯಮನೂರಪ್ಪ, ಎಸ್.ವಿರೇಶ್, ಕೆ.ನಿಂಗಪ್ಪ ಇದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…