ಬೆಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ಬಳಿಕ ‘ಜೈ ಹಿಂದ್’ ಹೇಳುವ ಪದ್ಧತಿ ಯನ್ನು ರೂಡಿಸಿಕೊಳ್ಳುವಂತೆ ಸೂಚಿಸಿ ಸಿಬ್ಬಂದಿಗೆ ಎಚ್ಎಎಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜ್ಞಾಪನಪತ್ರ ಹೊರಡಿಸಿದ್ದಾರೆ.
ಎಚ್ಎಎಲ್ ಠಾಣಾಧಿಕಾರಿ ಜ್ಞಾಪನಪತ್ರ ಹೊರಡಿಸಿರುವುದು ಗಮನಕ್ಕೆ ಬಂದಿಲ್ಲ. ಜ್ಞಾಪನಪತ್ರದ ಕುರಿತು ಪರಿಶೀಲಿಸಲಾಗುವುದು ಎಂದು ಈ ಕುರಿತು ವೈಟ್ಫೀಲ್ಡ್ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಇದನ್ನೂ ಓದಿ: ಕಥೆಯಲ್ಲ-ಜೀವನ: ಅನಾರೋಗ್ಯಪೀಡಿತ ಪೋಲಿಸಪ್ಪನ ನೋವಿನ ಕಥೆ-ವ್ಯಥೆ
ರಾಷ್ಟ್ರೀಯ ಭಾವನೆ ಅಂಗವಾಗಿ ಮೇಲಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ನಂತರ ‘ಜೈ ಹಿಂದ್’ ಹೇಳುವುದನ್ನು ರೂಢಿಸಿಕೊಳ್ಳಬೇಕು ಎಂದು ಠಾಣೆಯ ಎಲ್ಲ ಸಿಬ್ಬಂದಿಗೆ ಇನ್ಸ್ಪೆಕ್ಟರ್ ಸೂಚಿಸಿದ್ದಾರೆ.