More

    ಜೂನ್ 3, 4ರಂದು ಮಂಗಳೂರಿನಲ್ಲಿ ಹಲಸು ಹಬ್ಬ

    ಮಂಗಳೂರು: ಇಲ್ಲಿನ ಸಾವಯವ ಕೃಷಿಕ -ಗ್ರಾಹಕ ಬಳಗದ ವತಿಯಿಂದ 6ನೇ ವರ್ಷದ ಹಲಸು ಹಬ್ಬ ಜೂನ್ 3 ಮತ್ತು 4ರಂದು ಶರವು ದೇವಳ ಬಳಿಯ ಬಾಳಂಭಟ್ ಹಾಲ್‌ನಲ್ಲಿ ನಡೆಯಲಿದೆ.

    3ರಂದು ಬೆಳಗ್ಗೆ 9.30ಕ್ಕೆ ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮ ಉದ್ಘಾಟಿಸುವರು. ಭಟ್ ಆ್ಯಂಡ್ ಭಟ್ ಯೂ ಟ್ಯೂಬ್ ಚಾನಲ್‌ನ ಸುದರ್ಶನ್ ಭಟ್ ಬೆದ್ರಾಡಿ ಹಬ್ಬಕ್ಕೆ ಚಾಲನೆ ನೀಡುವರು.

    ಹಲಸಿನ ಹೋಳಿಗೆ ಮಾಡಿ ಹಲಸು ಮೌಲ್ಯ ವರ್ಧನೆ ಮಾಡಿದ ಲಕ್ಷ್ಮೀ ಚಿದಾನಂದ ಅವರನ್ನು ಉಪಮೇಯರ್ ಪೂರ್ಣಿಮಾ ಸನ್ಮಾನಿಸಲಿದ್ದಾರೆ. ಈ ಬಾರಿಯ ಹಲಸಿನ ಹಬ್ಬದಲ್ಲಿ ಹಲಸಿನ ವಿವಿಧ ಮೌಲ್ಯ ವರ್ಧಿತ ತಿಂಡಿಗಳು, ಬಣ್ಣದ ರುದ್ರಾಕ್ಷಿ, ಚಂದ್ರ ಹಲಸು, ಬಕ್ಕೆ ಹಲಸು, ಬಂಗಾರದ ಬಣ್ಣದ ಹಲಸು, ಹಲಸಿನ ಐಸ್‌ಕ್ರೀಂ, ಹಲಸಿನ ಹೋಳಿಗೆ, ಹಲಸಿನ ಗಿಡಗಳು ಲಭ್ಯವಿವೆ. ಹಲಸಿನ ವೈವಿಧ್ಯಮಯ ಖಾದ್ಯಗಳನ್ನು ಸ್ಥಳದಲ್ಲೇ ಮಾಡಿಕೊಡುವ ಕೌಂಟರ್ ಗಳಿವೆ.

    ಅಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಯವ ರೈತರು ಬೆಳೆದ ವಿವಿಧ ದಿನಸಿ, ಹಣ್ಣುಗಳ ಮಾರಾಟ, ತರಕಾರಿ ಗಿಡಗಳ ಮಾರಾಟ ವ್ಯವಸ್ಥೆಗಳಿವೆ. ನೇರವಾಗಿ ರೈತರೇ ಮಾರಾಟದಲ್ಲಿ ಪಾಲ್ಗೊಳ್ಳುವುದು ವಿಶೇಷ. ಬೆಳಗ್ಗೆ 7 ರಿಂದ ಸಂಜೆ 7 ರ ತನಕ ಸಾರ್ವಜನಿಕರ ಭೇಟಿಗೆ ಮುಕ್ತ ಅವಕಾಶವಿದೆ ಎಂದು ಸಾವಯವ ಕೃಷಿಕ ಗ್ರಾಹಕ ಬಳಗದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಭರತ್‌ರಾಜ್ (9449318553) ಅವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts