ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗಿ ಮಲಗಿದ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಮಲಗಿದ್ದ ರೀತಿಯಲ್ಲೇ ಮೃತಪಟ್ಟಿದ್ದಾರೆ.
ಆನಂದ್ ಕುಮಾರ್ ಮೃತ ಎಎಸ್ಐ. ರಾತ್ರಿ ಪಾಳಿ ಕೆಲಸ ಮಾಡಿ ಮನೆಗೆ ತೆರಳಿ ಮಲಗಿದ್ದರು. ಅವರನ್ನು ಮನೆಯವರು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಆನಂದ್ ಅವರು ನಾಗರಭಾವಿ ಬಳಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್)
ಮುಖ್ಯಮಂತ್ರಿ ಗಾದಿ ಕಲಹ ಇಂದು ಅಂತ್ಯ? ದೆಹಲಿಯಲ್ಲಿ ನಡೆಯಲಿದೆ ಬಹುಮುಖ್ಯ ಸಭೆ
ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ
ಸಿದ್ದರಾಮಯ್ಯ, ಡಿಕೆಶಿ ಜತೆಗೆ ಸಿಎಂ ರೇಸ್ನಲ್ಲಿ ಮತ್ತೊಂದು ಹೆಸರು: 25ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಒತ್ತಾಯ