ಬೆಂಗಳೂರು: ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಮನೆ ಮಾಲೀಕ ಹಲ್ಲೆಗೆರೆ ಶಂಕರ್ ಹಾಗೂ ಅವರ ಅಳಿಯಂದಿರಾದ ಶ್ರೀಕಾಂತ್ ಮತ್ತು ಪ್ರವೀಣ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕೂಲಂಕಷ ತನಿಖೆ ನಡೆಸಿದ ಬ್ಯಾಡರಹಳ್ಳಿ ಪೊಲೀಸರು, ಈ ಮೂವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ.
ಸೆಪ್ಟೆಂಬರ್ 17ಕ್ಕೆ ಬೆಳಕಿಗೆ ಬಂದಿದ್ದ ಈ ಪ್ರಕರಣದಲ್ಲಿ ಶಂಕರ್ ಪತ್ನಿ ಭಾರತಿ, ಮಕ್ಕಳಾದ ಮಧುಸಾಗರ್, ಸಿಂಚನಾ ಮತ್ತು ಸಿಂಧುರಾಣಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿಂಧುರಾಣಿ ಸಾಯುವ ಮುನ್ನ ತಮ್ಮ 9 ತಿಂಗಳ ಮಗುವನ್ನು ಕೊಲೆಗೈದಿದ್ದರು. ಮನೆಯಲ್ಲಿ ಸಿಕ್ಕಿದ್ದ ಲ್ಯಾಪ್ಟಾಪ್ ಹಾಗೂ ಡೆತ್ ನೋಟ್ಗಳ ಆಧಾರದ ಮೇಲೆ ಪೊಲೀಸರು ಶಂಕರ್ ಮತ್ತು ಇಬ್ಬರು ಅಳಿಯಂದಿರ ವಿಚಾರಣೆ ನಡೆಸಿದ್ದರು. ಇದೀಗ ಐಪಿಸಿ 306 ರಡಿ ಈ ಮೂವರನ್ನೂ ಬಂಧಿಸಲಾಗಿದ್ದು, ಸ್ವಲ್ಪ ಹೊತ್ತಿನಲ್ಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಶಂಕರ್ ಮನೆಯಲ್ಲಿ ಮೂರು ಡೆತ್ನೋಟ್ಗಳು ಸಿಕ್ಕಿದ್ದವು. ಮೃತ ಮಧುಸಾಗರ್ ತಂದೆಯ ವಿರುದ್ದ ಕಿರುಕುಳದ ಆರೋಪ ಮಾಡಿದ್ದರೆ, ಮೃತ ಹೆಣ್ಣುಮಕ್ಕಳು ಗಂಡಂದಿರ ವಿರುದ್ದ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪ ಮಾಡಿದ್ದರು.
ಏಜೆಂಟರ ಮೂಲಕ ಮತಾಂತರ ನಡೀತಿದೆ… ನಮ್ಮ ಸರ್ಕಾರ ಬ್ರೇಕ್ ಹಾಕುತ್ತೆ – ಸಚಿವ ಅಶೋಕ್
ಟಾಟಾ ಸನ್ಸ್ ತೆಕ್ಕೆಗೆ ಏರ್ ಇಂಡಿಯಾ… ಮನೆಗೇ ಮರಳುತ್ತಿರುವ ‘ಮಹಾರಾಜ’!