More

    ಜ.7 ಮತ್ತು 8ರಂದು ಹಂಪಿ ಉತ್ಸವ

    * ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಹೇಳಿಕೆ
    * ವಿಜೃಂಭಣೆ ಆಚರಣೆಗೆ ನಿರ್ಧಾರ

    ಹೊಸಪೇಟೆ: ಕೋವಿಡ್‌ನಿಂದಾಗಿ ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಂಪಿ ಉತ್ಸವ ಈ ಬಾರಿ ಜ.7 ಮತ್ತು 8 ರಂದು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದ್ದಾರೆ.
    ತಾಲೂಕಿನ ಕಮಲಾಪುರ ಕರಡಿ ಧಾಮದ ನೇಚರ್ ಕ್ಯಾಂಪ್ ಆವರಣದಲ್ಲಿ ಶುಕ್ರವಾರ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಸಚಿವರಾದ ಶಶಿಕಲಾ ಜೊಲ್ಲೆ, ಆನಂದ ಸಿಂಗ್ ಅವರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಾಗತ-ಶಿಷ್ಟಾಚಾರ ಸಮಿತಿ, ಸಾರಿಗೆ, ವಸತಿ, ಆಹಾರ, ಪ್ರಚಾರ-ಮಾಧ್ಯಮ, ಜಾಹೀರಾತು, ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪಾಸ್, ಪ್ರಮಾಣಪತ್ರ, ಬ್ಯಾನರ್, ಮೂಲಭೂತ ಸೌಲಭ್ಯ ಹಾಗೂ ಕುಡಿವ ನೀರಿನ ವ್ಯವಸ್ಥೆ, ಆರೋಗ್ಯ ಮತ್ತು ನೈರ್ಮಲೀಕರಣ, ಕಾನೂನು ಸುವ್ಯವಸ್ಥೆ, ಪ್ರದರ್ಶನ, ವೇದಿಕೆಗಳು, ಕ್ರೀಡಾ, ಜಾನಪದ ವಾಹಿನಿ ಮೆರವಣಿಗೆ, ಶೋಭಾಯಾತ್ರೆ, ಪುಸ್ತಕ ಪ್ರದರ್ಶನ, ಚಿತ್ರಕಲಾ ಶಿಬಿರ, ಶಿಲ್ಪಕಲೆ ಶಿಬಿರ, ಕವಿಗೋಷ್ಠಿ, ವಿಚಾರ ಸಂಕಿರಣ, ಶಾಲಾ ಮಕ್ಕಳ ನೃತ್ಯ, ಪ್ರಬಂಧ ಸ್ಪರ್ಧೆ, ಧ್ವನಿ-ಬೆಳಕು ಕಾರ್ಯಕ್ರಮ, ಕಲಾವಿದರ ಆಯ್ಕೆ,ರಾಯಲ್ಸ್ ದರ್ಬಾರ್, ತುಂಗಾರತಿ ಮಹೋತ್ಸವ, ಹಂಪಿ ಬೈ ಸ್ಕೈ, ವಸಂತ ವೈಭವ ಕಾರ್ಯಕ್ರಮ ಹಾಗೂ ಹಣಕಾಸು ಸೇರಿದಂತೆ ವಿವಿಧ ಸಮಿತಿಗಳನ್ನು ಇದೇ ವೇಳೆ ರಚಿಸಲಾಯಿತು.
    ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಲಹೆ-ಸೂಚನೆಗಳನ್ನು ಪಡೆಯಲಾಯಿತು. ನಂತರ ಅನುಸರಿಸಬೇಕಾದ ಕ್ರಮಗಳು ಕುರಿತು ಡಿಸಿ ತಿಳಿಸಿದರು. ಮುಂದಿನ ದಿನಗಳಲ್ಲಿ ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ರಚಿಸಲಾದ ಸಮಿತಿಗಳ ಅಧಿಕಾರಿಗಳ ಸಭೆಯನ್ನು ಕರೆದು ರೂಪ-ರೇಷೆಗಳ ಕುರಿತು ಚರ್ಚಿಸಲಾಗುವುದು ಎಂದು ಡಿಸಿ ತಿಳಿಸಿದರು.
    ಎಸ್ಪಿ ಡಾ.ಅರುಣ್ ಕೆ., ಎಸಿ ಸಿದ್ದರಾಮೇಶ್ವರ, ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ಡಿವೈಎಸ್ಪಿ ವಿಶ್ವನಾಥರಾವ ಕುಲಕರ್ಣಿ, ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಡಿಸಿ ಕಚೇರಿ ತಹಸೀಲ್ದಾರ್ ಗುರುಬಸವರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts