More

    ಪೊಲೀಸರ ಬ್ಯಾಡ್ಜ್ ಕೀಳಲು ಯತ್ನಿಸಿದ ಕೈ ಕಾರ್ಯಕರ್ತ

    ಹಾವೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೈ ಕಾರ್ಯಕರ್ತರು ಪೊಲೀಸರೊಂದಿಗೆ ಉದ್ಧಟತನ ತೋರಿದ ಘಟನೆ ನಡೆಯಿತು.

    ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟಯರ್​ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ಟೈರ್​ಗೆ ಬೆಂಕಿ ಹಚ್ಚಬೇಡಿ ಎಂದು ಸೂಚಿಸಿದರು. ಇಷ್ಟಕ್ಕೆ ರೊಚ್ಚಿಗೆದ್ದ ಕೆಲ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಮುಂದಾದರು. ಆಗ ವ್ಯಕ್ತಿಯೊಬ್ಬ ಪೊಲೀಸರ ಶರ್ಟ್​ಗೆ ಕೈ ಹಾಕಿ ಬ್ಯಾಡ್ಜ್ ಕೀಳಲು ಯತ್ನಿಸಿದ. ಕೆಲವರು ಪೊಲೀಸರ ಕಣ್ಣು ತಪ್ಪಿಸಿ ಟಯರ್​ಗೆ ಬೆಂಕಿಯಿಟ್ಟು ಸಂಭ್ರಮಿಸಿದರು. ಮಾಜಿ ಸಚಿವ ಬಸವರಾಜ ಶಿವಣ್ಣನವರ ಹಾಗೂ ಸ್ಥಳಕ್ಕೆ ಆಗಮಿಸಿದ ಎಸ್​ಪಿ ಹನುಮಂತರಾಯ ಪರಿಸ್ಥಿತಿ ಗಮನಿಸಿ ಮೂವರನ್ನು ವಶಕ್ಕೆ ಪಡೆದು ವಾತಾವರಣ ತಿಳಿಗೊಳಿಸಿದರು. ಪ್ರತಿಭಟನೆ ನಂತರ ವಶಕ್ಕೆ ಪಡೆದವರನ್ನು ಬಿಡುಗಡೆಗೊಳಿಸಿದರು. ಕೈ ಕಾರ್ಯಕರ್ತರ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧವೂ ವ್ಯಕ್ತವಾಯಿತು.

    ಸ್ಥಳೀಯ ಮೈಲಾರ ಮಹದೇವಪ್ಪ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜೆಪಿ ವೃತ್ತದ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿತು. ನಂತರ ಕೆಲಹೊತ್ತು ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ಘಟನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts