More

    ಅಧಿಕಾರಿಗಳ ಎಡವಟ್ಟಿನಿಂದ ಅಂಗವಿಕಲಗೆ ಸಂಕಷ್ಟ

    ಬೆಳ್ತಂಗಡಿ: ಚುನಾವಣಾ ಆಯೋಗ ಅಂಗವಿಕಲರಿಗೆ ಮನೆಯಲ್ಲೇ ಮತದಾನ ಅವಕಾಶ ನೀಡಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ಅಂಗವಿಕಲ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು.

    ಬೆಳ್ತಂಗಡಿ ನಗರದ ನಿವಾಸಿ ಬಿ.ಎ.ಮೊಹಮ್ಮದ್ ಎಂಡೋಸಲ್ಫಾನ್ ಸಂತ್ರಸ್ತರಾಗಿದ್ದು 30 ವರ್ಷ ಪ್ರಾಯದವರಾದರೂ ಮಲಗಿದ್ದಲ್ಲಿಯೇ ಇದ್ದಾರೆ. ಮೊಹಮ್ಮದ್ ಹೆಸರನ್ನು ಅಂಗವಿಕಲರ ಪಟ್ಟಿಯಲ್ಲಿ ಸೇರಿಸಿ ಮನೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪಪಂ ವಿಕಲಚೇತನರ ಪುನರ್ವಸತಿ ವಿಭಾಗದಿಂದ ಕಂದಾಯ ಇಲಾಖೆಗೆ ಪಟ್ಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಕಂದಾಯ ಇಲಾಖೆ ಈ ಬಗ್ಗೆ ಗಮನಹರಿಸಿಲ್ಲ. ಆ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲೂ ಅವರ ಹೆಸರು ಅಂಗವಿಕಲ ಮತದಾದರರ ಪಟ್ಟಿಯಲ್ಲಿ(ಪಿಡಬ್ಲುೃಡಿ) ನಾಪತ್ತೆಯಾಗಿದೆ. ಈ ಬಗ್ಗೆ ಪಪಂನಲ್ಲಿ ವಿಚಾರಿಸಿದರೆ ನಾವು ಕಳುಹಿಸಿದ್ದೇವೆ. ಆದರೆ ಎಂಟ್ರಿ ಆಗಿಲ್ಲ ಎಂಬ ಉತ್ತರ ಬಂದಿತ್ತು.

    ಬಿ.ಎ.ಮೊಹಮ್ಮದ್ ಅವರನ್ನು ಅವರ ಸಂಬಂಧಿಕರೇ ಎತ್ತಿಕೊಂಡು ಬೆಳ್ತಂಗಡಿ ಮಾದರಿ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಅಧಿಕಾರಿಗಳ ನಿರ್ಲಕ್ಷೃದ ನಡುವೆಯೂ ಅವರು ಮತ ಚಲಾಯಿಸಿದ್ದಾರೆ. ಹಿಂದೆಲ್ಲ ಇವರನ್ನು ಅವರ ತಂದೆ ಎತ್ತಿಕೊಂಡು ಹೋಗಿ ಮತಚಲಾಯಿಸುತ್ತಿದ್ದರು. ಒಂದೂವರೆ ವರ್ಷದ ಹಿಂದೆ ನಡೆದ ಅಪಘಾತದ ಬಳಿಕ ತಂದೆಗೂ ನಡೆಯಲು ಕಷ್ಟವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts