More

    ತಪ್ಪಿತಸ್ಥನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ಮಾಜಿ ಸಂಸದ

    ಬಿಹಾರ: ಐಎಎಸ್ ಅಧಿಕಾರಿಯೊಬ್ಬರ ಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ 14 ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದ ಬಿಹಾರದ ಮಾಜಿ ಸಂಸದ ಆನಂದ್ ಮೋಹನ್ ಸಿಂಗ್ ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.

    ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಈ ದೇಶ ಯಾರ ಸ್ವತ್ತಲ್ಲ. ನಾನು ಕಾನೂನು ಮತ್ತು ಸಂವಿಧಾನವನ್ನು ನಂಬುತ್ತೇನೆ. ಯಾವುದೇ ದೂರುಗಳಿಲ್ಲದೆ 15 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಿದ್ದೇನೆ. ನಾನು ತಪ್ಪಿತಸ್ಥನೆಂದು ಸರ್ಕಾರ ನಂಬಿದರೆ ನಾನು ಗಲ್ಲಿಗೇರಲು ಸಿದ್ಧ ಎಂದು ಮಾಜಿ ಸಂಸದರು ಹೇಳಿದರು.

    ಇದನ್ನೂ ಓದಿ: ಪತ್ನಿಯ ಶೋಕಿಗೆ ಬಲಿಯಾಯ್ತು ಸುಂದರ ಕುಟುಂಬ; ಮಕ್ಕಳೊಂದಿಗೆ ಪ್ರಾಣಬಿಟ್ಟ ತಂದೆ

    1994ರ ದುಷ್ಕೃತ್ಯವೊಂದರಲ್ಲಿ ಅಧಿಕಾರಿಯೊಬ್ಬರ ಹತ್ಯೆಯಾಗಿತ್ತು. ಹತ್ಯೆಗೈದ ಗುಂಪನ್ನು ಪ್ರಚೋದಿಸಿದ ಆರೋಪದಲ್ಲಿ ಮಾಜಿ ಸಂಸದ ತಪ್ಪಿತಸ್ಥನೆಂದು ಸಾಬೀತಾಗಿತ್ತು. ಆದರೆ ಸದ್ಯ, ಬಿಹಾರ ಸರ್ಕಾರ ಜೈಲಿನ ನೀತಿ-ನಿಯಮಗಳನ್ನು ಬದಲಾಯಿಸಿದ ಬೆನ್ನಲ್ಲೇ ಮಾಜಿ ಸಂಸದ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಜತೆಗೆ, 27 ಅಪರಾಧಿಗಳ ಬಿಡುಗಡೆಗೂ ಇದು ದಾರಿ ಮಾಡಿಕೊಟ್ಟಿದೆ. ಆನಂದ್ ಮೋಹನ್ ಸಿಂಗ್ ಅವರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕುರಿತು ಸುಪ್ರೀಂ ಕೋರ್ಟ್ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts