ಬೆಂಗಳೂರು: ‘ಶ್ರೀ ಜಗನ್ನಾಥದಾಸರು’, ‘ಶ್ರೀ ವಿಜಯದಾಸರು’, ‘ಶ್ರೀ ಪ್ರಸನ್ನವೆಂಕಟದಾಸರು’ … ಹೀಗೆ ಸಾಲುಸಾಲು ದಾಸವರೇಣ್ಯರ ಚಿತ್ರಗಳನ್ನು ನಿರ್ದೇಶಿಸಿರುವ ಮಧುಸೂದನ್ ಹವಾಲ್ದಾರ್ ಈಗ ಇನ್ನೊಂದು ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಬಾರಿ ಅವರು ‘ಹನುಮ ಭೀಮ ಮಧ್ವ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಮಧ್ವನವಮಿ ಅಂಗವಾಗಿ, ಸೋಮವಾರ ಚಿತ್ರದ ಅಧಿಕೃತ ಘೋಷಣೆಯಾಗಿದೆ.
ಇದನ್ನೂ ಓದಿ: ‘ಪಠಾಣ್’ ಯಶಸ್ಸು: ಈ ದೇಶ ಯಾವತ್ತೂ ಖಾನ್ಗಳನ್ನು ಪ್ರೀತಿಸುತ್ತಲೇ ಬಂದಿದೆ ಎಂದ ಕಂಗನಾ ರಣಾವತ್
ವಾಯುದೇವರು ಮೊದಲು ಹನುಮನಾಗಿ ಅವತರಿಸಿ ಶ್ರೀರಾಮದೇವರನ್ನು ಸೇವೆ ಮಾಡುತ್ತಾರೆ. ನಂತರ ದ್ವಾಪರದಲ್ಲಿ ಭೀಮಸೇನನಾಗಿ ಶ್ರೀ ಕೃಷ್ಣನನ್ನು, ಆನಂತರ ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತರಿಸಿ ಶ್ರೀವೇದವ್ಯಾಸ ದೇವರನ್ನು ಭಜಿಸುತ್ತಾರೆ. ಈ ಮೂರು ಅವರತಾರಗಳ ಕುರಿತು ಈ ಚಿತ್ರದಲ್ಲಿರುತ್ತದೆ.
ಶ್ರೀಗಂಧ ಪಿಕ್ಚರ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಮಧುಸೂದನ್ ಹವಾಲ್ದಾರ್ ನಿರ್ದೇಶನ ಮಾಡುತ್ತಿದ್ದಾರೆ. ಜೆ.ಎಂ. ಪ್ರಹ್ಲಾದ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದಲ್ಲಿ ಮಹಾಮಹಿಮರ ಮಹಿಮೆ ಸಾರುವ ಎಂಟು ಹಾಡುಗಳಿರಲಿದ್ದು, ವಿಜಯ್ ಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ.
ಇದನ್ನೂ ಓದಿ: ರಾಮಾಯಣದಿಂದ ಹೃತಿಕ್ ಹೊರಕ್ಕೆ … ರಾವಣನಾಗ್ತಾರಾ ಯಶ್?
ಈ ಚಿತ್ರವನ್ನು ಆನೆಗೊಂದಿ, ಕನಕಗಿರಿ, ಬೀಳಗಿ, ಹೊಸಪೇಟೆ ಸುತ್ತಮುತ್ತ ಚಿತ್ರೀಕರಣ ಮಾಡಬೇಕೆಂಬುದು ಚಿತ್ರತಂಡದ ಯೋಚನೆ. ಈ ಚಿತ್ರದಲ್ಲಿ ಹೊಸ ಪ್ರತಿಭೆಗಳೇ ನಟಿಸುತ್ತಿರುವುದು ವಿಶೇಷ.