More

    ಚಿಕ್ಕನೇರಳೆ ಗ್ರಾಮದಲ್ಲಿ ಹನುಮ ಜಯಂತಿ

    ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಿಕ್ಕನೇರಳೆ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹನುಮ ಜಯಂತಿ ಹಾಗೂ ಬೃಹತ್ ಮೆರವಣಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು.ಶನಿವಾರ ಬೆಳಗಿನಿಂದಲೇ ದೇವಸ್ಥಾನದ ಒಳ ಆವರಣದಲ್ಲಿ ಹನುಮಾನ್ ಚಾಲೀಸಾ ಪಠಣ ಹಾಗೂ ವಿಶೇಷ ಪೂಜೆಗಳು ನೆರವೇರಿದವು. ಸ್ವಾಮಿಗೆ ವಿವಿಧ ಪುಷ್ಪಗಳಿಂದ ವಿಶೇಷವಾಗಿ ಅಲಂಕಾರ ಮಾಡಿದ್ದು ಗಮನ ಸೆಳೆಯಿತು. ಮಧ್ಯಾಹ್ನ ಆರಂಭಗೊಂಡ ಬೃಹತ್ ಮೆರವಣಿಗೆ ಚಿಕ್ಕನೇರಳೆ, ಸಂತೇಮಾಳ ಸೇರಿದಂತೆ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಆಂಜನೇಯನ ಮೂರ್ತಿ ಹಾಗೂ ಅಯೋಧ್ಯಾ ರಾಮಮಂದಿರ ಸೇರಿದಂತೆ ಹಲವು ಸ್ತಬ್ಧ ಚಿತ್ರಗಳು ಆಕರ್ಷಣೆಯಾಗಿದ್ದವು.ಸುತ್ತಮುತ್ತಲ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಯುವಜನರು ಹಾಡಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಮುಸಲ್ಮಾನ ಮುಖಂಡರು ಹಣ್ಣಿನ ಜ್ಯೂಸ್ ವಿತರಣೆ ಮಾಡಿ ಭಾವೈಕ್ಯತೆ ಮೆರೆದರು. ಭಕ್ತರಿಗೆ ಸಮಿತಿ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts