More

    ಹನುಮಾನ್​ ಚಾಲೀಸಾ ಪ್ರಕರಣ; ಸಂತ್ರಸ್ತನನ್ನೇ ವಶಕ್ಕೆ ಪಡೆದ ಪೊಲೀಸರು

    ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್​ ಪೊಲೀಸ್​ ಠಾಣೆ ಸಿಬ್ಬಂದಿ ಸಂತ್ರಸ್ತನನ್ನು ವಶಕ್ಕೆ ಪಡೆದಿದ್ದಾರೆ.

    ನಗರ್ತಪೇಟೆಯಲ್ಲಿರುವ ಮೊಬೈಲ್​ ಅಂಗಡಿ ಮಾಲೀಕ ಮುಖೇಶ್​ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿರುವುದನ್ನು ಖಂಡಿಸಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

    ಭಾನುವಾರ ಸಂಜೆ ತಮ್ಮ ಅಂಗಡಿಯಲ್ಲಿ ಹನುಮಾನ್​ ಚಾಲೀಸಾ ಹಾಕಿದ್ದಕ್ಕೆ ಐದರಿಂದ ಆರು ಮಂದಿ ಯುವಕರು ಮಾಲೀಕ ಮುಖೇಶ್​ ಮೇಲೆ ಹಲ್ಲೆ ನಡೆಸಿದ್ದರು. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು. ಘಟನೆ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದವರನ್ನು ರಕ್ಷಿಸಲು ಬೇರೆ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

    Suresh Kumar

    ಇದನ್ನೂ ಓದಿ: ಐಪಿಎಲ್​ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಮತ್ತೊಂದು ಆಘಾತ; ಸ್ಟಾರ್​ ವೇಗಿ ಅಲಭ್ಯ

    ಇದಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಂತ್ರಸ್ತ ಮುಖೇಶ್​ ಪ್ರತಿಭಟನಾ ರ‍್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಬಿಜೆಪಿ ಶಾಸಕ ಸುರೇಶ್​ ಕುಮಾರ್​ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರು ಅವರನ್ನು ಎಳೆದಾಡಿರುವ ಘಟನೆ ನಡೆದಿದೆ.

    ಈ ಕುರಿತು ಮಾತನಾಡಿದ ಶಾಸಕ ಸುರೇಶ್​ ಕುಮಾರ್​, ನಾವು ಬೆಂಗಳೂರಿನಲ್ಲಿ ಇಲ್ಲ. ಹಿಂದೆ ಕಾಶ್ಮೀರದಲ್ಲಿ ಆದಂತೆ ಇಲ್ಲಿ ಆಗುತ್ತಿದೆ. ನಮ್ಮ ಮೇಲೆ ಇಲ್ಲಿ ದೌರ್ಜನ್ಯ ನಡೆಯುತ್ತಿದೆ. ಕೂಡಲೇ ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ಸುರೇಶ್​ ಕುಮಾರ್​ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts