blank

ಗುಟ್ಖಾ ಸೇವನೆಯಿಂದ ಬಾಯಿ ಕ್ಯಾನ್ಸರ್

blank

ಹನುಮಸಾಗರ: ಎಲ್ಲರೂ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಅಜಯಕುಮಾರ ದೇವೂರ ಹೇಳಿದರು.
ಸಮೀಪದ ಕಾಟಾಪುರ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ವಿಶ್ವ ಕ್ಯಾನ್ಸರ್ ದಿನಾಚರಣೆ ನಿಮಿತ್ತ ಜಾಗೃತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾನ್ಯವಾಗಿ ಗುಟ್ಖಾ ಸೇವಿಸುವುದರಿಂದ ಬಾಯಿ ಕ್ಯಾನ್ಸರ್ ಬರುತ್ತದೆ. ವಾಸಿಯಾಗದೇ ಇರುವ ಗಾಯ, ಬಹಳ ದಿನಗಳ ಕೆಮ್ಮು, ಊಟ ಮಾಡುವಾಗ ಗಂಟಲು ನೋವು ಇದು ಕ್ಯಾನ್ಸರ್ ಲಕ್ಷಣಗಳಾಗಿವೆ. ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು. ಮಹಿಳೆಯರಲ್ಲಿ ಸ್ತನ ಹಾಗೂ ಗರ್ಭಕೋರಳಿನಂತಹ ಕ್ಯಾನ್ಸರ್ ತಗಲುವ ಸಾಧ್ಯತೆ ಇರುತ್ತದೆ. ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡಾಗ ಪ್ರಾಥಮಿಕ ಹಂತದಲ್ಲಿ ರೋಗವನ್ನು ಗುಣಪಡಿಸಬಹುದು ಎಂದರು.
ಮುಖ್ಯ ಶಿಕ್ಷಕ ಶಿವಪ್ಪ ಚೊಳಚಗುಡ್ಡ, ಆರೋಗ್ಯ ಇಲಾಖೆ ಸಿಬ್ಬಂದಿ ಸುಧಾ, ರಾಧಾ ರಾಠೋಡ, ವಿಜಯಲಕ್ಷ್ಮೀ ಇತರರಿದ್ದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…