ಶೈಕ್ಷಣಿಕ ಅಭಿವೃದ್ಧಿಗೆ ಸರ್ವರ ಸಹಕಾರ ಅವಶ್ಯ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿಕೆ

blank

ಹನುಮಸಾಗರ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಘ, ಸಂಸ್ಥೆಗಳು ಉಚಿತವಾಗಿ ಸೈಕಲ್ ವಿತರಿಸುತ್ತಿರುವುದು ಶ್ಲಾಘನಾರ್ಹ ಕಾರ್ಯ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

blank

ಮನ್ನೇರಾಳ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೀಡ್ ಬೇಸ್ ಇಂಡಿಯಾ ಹಾಗೂ ರೈನ್ಬೋ ಸಂಸ್ಥೆಯಿಂದ ಉಚಿತವಾಗಿ ಸೈಕಲ್,ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರವೇ ಎಲ್ಲ ಸವಲತ್ತು ಒದಗಿಸಬೇಕು ಎನ್ನುವುದು ತಪ್ಪು. ಮಕ್ಕಳ ಶಿಕ್ಷಣಕ್ಕೆ ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರವೂ ಅತ್ಯಗತ್ಯ. ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ನೀಡಿದ ನೀಡ್ ಬೇಸ್ ಇಂಡಿಯಾ ಕಾರ್ಯ ಇತರರಿಗೆ ಮಾದರಿ ಎಂದರು. ನೀಡ್ ಬೇಸ್ ಇಂಡಿಯಾ ಸಂಸ್ಥೆಯ ಎಸ್.ರಹೀಮ್, ಸಿ.ವಿ.ಮಲ್ಲಿಕಾರ್ಜುನ, ತಾಪಂ ಮಾಜಿ ಸದಸ್ಯ ಸುರೇಶ ಕುಂಟನಗೌಡ, ಶಿಕ್ಷಣ ಸಂಯೋಜಕ ದಾವಲಸಾಬ್ ವಾಲಿಕಾರ, ಸಿಆರ್‌ಪಿ ಯಮನೂರಪ್ಪ ಕುರಿ, ಪ್ರಭಾರ ಮುಖ್ಯಶಿಕ್ಷಕ ಶೇಷಣಗೌಡ ಪಾಟೀಲ್, ಮುಖಂಡರಾದ ಮಹಾಂತೇಶ ಅಂಗಡಿ, ಮಲ್ಲಯ್ಯ ಕೋಮಾರಿ, ಕಿಶನ್‌ರಾವ್ ಕುಲಕರ್ಣಿ, ಸಿದ್ದರಾಮ ಬಾಮನಿ ಇತರರಿದ್ದರು.

Share This Article

ದೇ ಪದೇ ಗಂಟಲು ನೋವು ಬರುತ್ತಿದೆಯೇ? ಹಾಗಾದ್ರೆ ಈ ಸುಲಭ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ | Home remedies

Home remedies: ಹವಾಮಾನ ಬದಲಾದಂತೆ ಸೋಂಕಿನ ಹರಡುವಿಕೆ ಕೂಡಾ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಅನೇಕ ಜನರು…

ಈರುಳ್ಳಿ ರಸ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ | Onion Juice

Onion Juice: ಈರುಳ್ಳಿ ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಡುಗೆಯನ್ನು…

ನೀವು ಹೆಚ್ಚು ಬೀನ್ಸ್​​ ತಿನ್ನುತ್ತೀರಾ? ಹಾಗಾದ್ರೆ ಇದನ್ನು ತಿಳಿಯಲೇ ಬೇಕು | Beans

Beans: ಹೆಚ್ಚಿನ ಜನರಿಗೆ ಬೀನ್ಸ್ ಒಂದು ಪ್ರಮುಖ ಆಹಾರವಾಗಿದೆ. ದ್ವಿದಳ ಧಾನ್ಯಗಳ ಕುಟುಂಬಕ್ಕೆ ಸೇರಿದ ಇವು…