ಭಾಷೆ ಬೆಳವಣಿಗೆಗೆ ಎಲ್ಲರೂ ಶ್ರಮಿಸಲಿ

blank

ಹನುಮಸಾಗರ: ಕನ್ನಡ ಭಾಷೆ ಬೆಳವಣಿಗೆಗೆ ನಾಡಿನ ಎಲ್ಲರೂ ಶ್ರಮಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್. ಪಾಟೀಲ್ ಹೇಳಿದರು.

ಸಮೀಪದ ಹೂಲಗೇರಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನೆಲ, ಜಲ ಹಾಗೂ ಭಾಷೆಯ ವಿಷಯ ಬಂದಾಗ ಜಾತಿ, ಮತ, ಪಂಥ ಮರೆತು ಎಲ್ಲರೂ ಒಟ್ಟಾಗಬೇಕು. ವೈಯಕ್ತಿಕ ಭಿನ್ನಾಭಿಪ್ರಾಯ ಮರೆತು ಸಮ್ಮೇಳನ ಯಶಸ್ಸಿಗೆ ಶ್ರಮಿಸಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಕಸಾಪ ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ಲೆಂಕಪ್ಪ ವಾಲೀಕಾರ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಜಿಪಂ ಮಾಜಿ ಸದಸ್ಯ ಪ್ರಕಾಶ ರಾಠೋಡ, ತಾಪಂ ಮಾಜಿ ಸದಸ್ಯ ಸುರೇಶ ಕುಂಟನಗೌಡ್ರ, ಮುಖಂಡ ಎಂ.ಆರ್. ಪಾಟೀಲ್, ಕಸಾಪ ಜಿಲ್ಲೆ, ತಾಲೂಕು ಹಾಗೂ ಹನುಮಸಾಗರ ಹೋಬಳಿ ಘಟಕದ ಪದಾಧಿಕಾರಿಗಳು, ಮುಖಂಡರು, ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.

ತಡವಾಗಿ ಬಂದ ಶಾಸಕ: ಬೆಳ್ಳಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಬರಬೇಕಿದ್ದ ಶಾಸಕ ದೊಡ್ಡನಗೌಡ ಎಚ್. ಪಾಟೀಲ್, 8.30ಕ್ಕೆ ಬಂದಿದ್ದರಿಂದ ಇವರಿಗಾಗಿ ಆಗಮಿಕರೆಲ್ಲರೂ ಕಾದು ನಿಲ್ಲಬೇಕಾಯಿತು.

ಭಾಷೆ ಬೆಳವಣಿಗೆಗೆ ಎಲ್ಲರೂ ಶ್ರಮಿಸಲಿ

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…